ನವದೆಹಲಿ/ಲೇಹ್: ಯುದ್ಧ ತಾಲೀಮು ನಡೆಸುತ್ತಿದ್ದ ಐವರು ಯೋಧರು ಶ್ಯೋಕ್ ನದಿಯಲ್ಲಿ ಕೊಚ್ಚಿಹೋದ ಘಟನೆ ಪೂರ್ವ ಲಡಾಖ್ನಲ್ಲಿ ನಡೆದಿದೆ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
‘ಲಡಾಖ್ನ ಶ್ಯೋಕ್ ನದಿ ದಾಟುವಾಗ ಭಾರತೀಯ ಸೇನೆಯ ಟ್ಯಾಂಕ್ ಕೊಚ್ಚಿ ಹೋಗಿದ್ದು, ಐವರು ಧೈರ್ಯಶಾಲಿ ಯೋಧರು ಸಾವಿಗೀಡಾಗಿರುವ ಘಟನೆ ಮನಸ್ಸಿಗೆ ನೋವುಂಟು ಮಾಡಿದೆ. ಮೃತ ಯೋಧರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ನಮ್ಮ ವೀರ ಸೈನಿಕರ ಅನುಕರಣೀಯ ಸೇವೆಗೆ ದೇಶವು ಒಟ್ಟಾಗಿ ನಿಂತಿದೆ’ ಎಂದು ಖರ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
Deeply distressed at the loss of lives of 5 Indian Army bravehearts, including a JCO, while getting a T-72 tank across a river in Ladakh.
— Mallikarjun Kharge (@kharge) June 29, 2024
Our heartfelt condolences to the families of the Army personnel who fell victim to this painful tragedy.
In this hour of grief, the nation…
‘ಯೋಧರ ಸಾವಿನ ಸುದ್ದಿ ಅತ್ಯಂತ ದುಃಖ ತಂದಿದೆ. ಯೋಧರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ನಾವು ಅವರೊಂದಿಗೆ ನಿಲ್ಲುತ್ತೇವೆ. ಯೋಧರ ಸಮರ್ಪಣೆ, ಸೇವೆ ಮತ್ತು ತ್ಯಾಗವನ್ನು ದೇಶವು ಯಾವಾಗಲೂ ಸ್ಮರಿಸುತ್ತದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
लद्दाख में टैंक के नदी पार करने के सैन्य अभ्यास के दौरान हुए हादसे में भारतीय सेना के पांच जवानों की शहादत का समाचार अत्यंत दुखद है।
— Rahul Gandhi (@RahulGandhi) June 29, 2024
सभी शहीद जवानों को विनम्र श्रद्धांजलि अर्पित करते हुए शोक संतप्त परिजनों के प्रति गहरी संवेदनाएं व्यक्त करता हूं। दुख की इस घड़ी में हम उनके साथ…
‘ಲಡಾಖ್ನಲ್ಲಿ ಐವರು ಸೈನಿಕರು ಹುತಾತ್ಮರಾದ ಸುದ್ದಿ ಅತ್ಯಂತ ದುಃಖಕರವಾಗಿದೆ. ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ. ದುಃಖತಪ್ತ ಕುಟುಂಬಸ್ಥರಿಗೆ ನನ್ನ ಸಂತಾಪಗಳು’ ಎಂದು ಪ್ರಿಯಾಂಕಾ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
लद्दाख में लाइन ऑफ कंट्रोल के पास अचानक आई बाढ़ में सेना के पांच जवानों के शहीद होने का समाचार अत्यंत दुखद है।
— Priyanka Gandhi Vadra (@priyankagandhi) June 29, 2024
ईश्वर दिवंगत आत्माओं को शांति प्रदान करें। शोक-संतप्त परिवारों के प्रति मेरी गहरी संवेदनाएं।
हमारे वीर जवानों के इस सर्वोच्च बलिदान के लिए देश सदैव उनका और उनके…
‘ಘಟನೆ ನಡೆದ ಕೂಡಲೇ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ನೀರಿನ ರಭಸ ವಿಪರೀತವಾಗಿದ್ದರಿಂದ ಸೈನಿಕರ ಜೀವ ಉಳಿಸಲು ಸಾಧ್ಯವಾಗಲಿಲ್ಲ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ಹಿಮಗಡ್ಡೆಗಳು ಕರಗುತ್ತಿರುವುದರಿಂದ ಶ್ಯೋಕ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.