ಬುಧವಾರ, 26 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ಸೂನ್: ಗೋವಾದಲ್ಲಿನ ಜಲಪಾತಗಳ ನೋಡಲು ನಿಷೇಧ– ಪ್ರವಾಸೋದ್ಯಮ ಸಚಿವ ಕಿಡಿ

ಅರಣ್ಯ ಇಲಾಖೆಯ ನಿರ್ಧಾರಕ್ಕೆ ಪ್ರವಾಸೋದ್ಯಮ ಸಚಿವ ರೋಹನ್ ಕೌಂತೆ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
Published 18 ಜೂನ್ 2024, 10:29 IST
Last Updated 18 ಜೂನ್ 2024, 10:29 IST
ಅಕ್ಷರ ಗಾತ್ರ

ಗೋವಾ: ಮಾನ್ಸೂನ್ ಸಂದರ್ಭದಲ್ಲಿ ಗೋವಾ ರಾಜ್ಯದ ವ್ಯಾಪ್ತಿಯ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸುವ ಅಲ್ಲಿನ ಅರಣ್ಯ ಇಲಾಖೆಯ ನಿರ್ಧಾರಕ್ಕೆ ಪ್ರವಾಸೋದ್ಯಮ ಸಚಿವ ರೋಹನ್ ಕೌಂತೆ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯಿಂದ ಬಂದಿರುವ ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಇಂತಹ ಮೂರ್ಖತನದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಜಲಪಾತಗಳು ಗೋವಾ ಒಳನಾಡು ಪ್ರವಾಸೋದ್ಯಮದ ಜೀವನಾಡಿ ಎಂದು ತಿಳಿಸಿದ್ದಾರೆ.

ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವುದಲ್ಲದೇ ಗೋವಾ ರಾಜ್ಯದ ಪ್ರಾಕೃತಿಕ ಸೊಬಗನ್ನು ನಮ್ಮ ಜನಪಾತಗಳು ತೆರೆದಿಡುತ್ತವೆ. ನಿಷೇಧ ಕುರಿತು ಅರಣ್ಯ ಸಚಿವ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಸುರಕ್ಷತೆ ಬೇಕು ನಿಜ. ಹಾಗಂತ, ಜಲಪಾತಗಳನ್ನು ನೋಡಲು ತಡೆಯುವುದಕ್ಕೆ ಅದೊಂದೆ ಕಾರಣವಾಗಬಾರದು. ಅದಕ್ಕೆ ನಾವು ಪರಿಹಾರ ಹುಡುಕುತ್ತೇವೆ ಎಂದು ತಿಳಿಸಿದ್ದಾರೆ.

ಮುಂಗಾರು ಮಳೆ ಸಮಯದಲ್ಲಿ ವಿಶ್ವವಿಖ್ಯಾತ ದೂದ್‌ಸಾಗರ ಸೇರಿದಂತೆ ಎಲ್ಲ ಜಲಪಾತಗಳಿಗೆ ಪ್ರವೇಶವನ್ನು ನಿರ್ಭಂದಿಸುವ ಆದೇಶವನ್ನು ಗೋವಾ ಅರಣ್ಯ ಇಲಾಖೆ ಇತ್ತೀಚೆಗೆ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT