ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಕಸ್ಮಿಕವಾಗಿ ಗುಂಡು ಸಿಡಿದು ಗಾಯ: ನಟ ಗೋವಿಂದ ಆಸ್ಪತ್ರೆಯಿಂದ ಬಿಡುಗಡೆ

Published : 4 ಅಕ್ಟೋಬರ್ 2024, 9:12 IST
Last Updated : 4 ಅಕ್ಟೋಬರ್ 2024, 9:12 IST
ಫಾಲೋ ಮಾಡಿ
Comments

ಮುಂಬೈ: ತಮ್ಮ ರಿವಾಲ್ವರ್‌ನಿಂದ ಗುಂಡು ಆಕಸ್ಮಿಕವಾಗಿ ಸಿಡಿದು ಗಾಯಗೊಂಡಿದ್ದ ನಟ, ರಾಜಕಾರಣಿ ಗೋವಿಂದ ಆಸ್ಪತ್ರೆಯಿಂದ ಇಂದು (ಶುಕ್ರವಾರ) ಬಿಡುಗಡೆಯಾಗಿದ್ದಾರೆ.

ಪರವಾನಗಿ ಹೊಂದಿದ ಪಿಸ್ತೂಲ್ ಅನ್ನು ಸುರಕ್ಷಿತ ಸ್ಥಳದಲ್ಲಿ ಇಡುವಾಗ ಆಕಸ್ಮಿಕವಾಗಿ ಗುಂಡು ಸಿಡಿದು ಗೋವಿಂದ ಅವರ ಕಾಲಿಗೆ ಗಾಯವಾಗಿತ್ತು.

ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷದ ನಾಯಕರಾಗಿರುವ ಗೋವಿಂದ, ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

60 ವರ್ಷದ ಗೋವಿಂದ ಚೇತರಿಕೆ ಹಂತದಲ್ಲಿದ್ದು, ಕುಟುಂಬದ ಸದಸ್ಯರು ಅವರನ್ನು ಗಾಲಿಕುರ್ಚಿ ಸಹಾಯದಿಂದ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ನನ್ನ ಆರೈಕೆಗೆ ಪ್ರಾರ್ಥಿಸಿದ, ನನ್ನನ್ನು ಪ್ರೀತಿಸುವ ಅಭಿಮಾನಿಗಳು ಸೇರಿದಂತೆ ಎಲ್ಲರಿಗೂ ಗೋವಿಂದ ಧನ್ಯವಾದಗಳನ್ನು ತಿಳಿಸಿದ್ದಾರೆ.

ಗೋವಿಂದ ಅವರಿಗೆ ವೈದ್ಯರು ಆರು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ಪತ್ನಿ ಸುನಿತಾ ಅಹುಜಾ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮುಂಬೈ ಪೊಲೀಸ್ ಹಾಗೂ ಅಪರಾಧ ವಿಭಾಗ ತನಿಖೆಯನ್ನು ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT