ಈಗಾಗಲೇ ಉತ್ತರ ಪ್ರದೇಶ ಸರ್ಕಾರ ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹ 2ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹ 50 ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ. ಈ ಪರಿಹಾರವು ತುಂಬಾ ಕಡಿಮೆಯಾಗಿದೆ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಮತ್ತು ಅದನ್ನು ಆದಷ್ಟು ಬೇಗ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕಳೆದ ಶುಕ್ರವಾರ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ರಾಹುಲ್ ಗಾಂಧಿ ಅವರಿಗೆ ಸಾಂತ್ವಾನ ಹೇಳಿದ್ದರು.
ಈ ಘಟನೆ ಕುರಿತಂತೆ ನಾನು ರಾಜಕೀಯ ದೃಷ್ಟಿಕೋನದಿಂದ ಮಾತನಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಆಡಳಿತಾತ್ಮಕ ಲೋಪಗಳು ಇವೆ. ಹಲವು ಪ್ರಮಾದಗಳೂ ಇದ್ದು, ಅವುಗಳನ್ನು ಗುರುತಿಸಬೇಕಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಗಿರುವ ರಾಹುಲ್ ಗಾಂಧಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದರು.