<p><strong>ಸಿಲಿಗುರಿ (ಪಶ್ಚಿಮ ಬಂಗಾಳ)</strong>: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಾದ್ಯಂತ ದ್ವೇಷ ಮತ್ತು ಹಿಂಸೆಯನ್ನು ಹರಡುವ ಕೆಲಸ ಮಾಡುತ್ತಿದೆ. ಬಡವರು ಮತ್ತು ಯುವಕರ ಹಿತವನ್ನು ಕಡೆಗಣಿಸಿ ಬೃಹತ್ ಕಾರ್ಪೊರೇಟ್ ಸಂಸ್ಥೆಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದರು.</p>.<p>‘ಅಲ್ಪಾವಧಿ ನೇಮಕಾತಿಯ ಅಗ್ನಿವೀರ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳನ್ನು ಸೇರಬಯಸಿದ್ದ ಯುವಕರನ್ನು ಅಣಕಿಸುವ ಕೆಲಸ ಮಾಡಿದೆ’ ಎಂದು ದೂರಿದರು. ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯಲ್ಲಿ ಅವರು ಸಿಲಿಗುರಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ದ್ವೇಷ ಮತ್ತು ಹಿಂಸೆಯನ್ನು ದೇಶದಾದ್ಯಂತ ಹರಡಲಾಗುತ್ತಿದೆ. ಇದು ಯಾವ ಉದ್ದೇಶವನ್ನೂ ಈಡೇರಿಸುವುದಿಲ್ಲ. ದ್ವೇಷ ಹರಡುವ ಬದಲು ನಾವು ನಮ್ಮ ಯುವಕರಿಗಾಗಿ ಪ್ರೀತಿ ಮತ್ತು ನ್ಯಾಯವನ್ನು ಹರಡುವ ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.</p>.<p>‘ಬಂಗಾಳಕ್ಕೆ ವಿಶೇಷ ಸ್ಥಾನ ಇದೆ. ಇದು ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಸೈದ್ಧಾಂತಿಕ ಹೋರಾಟಕ್ಕೆ ನಾಯಕತ್ವ ಒದಗಿಸಿದೆ. ಪ್ರಸಕ್ತ ಸಂದರ್ಭದಲ್ಲಿ ದ್ವೇಷದ ವಿರುದ್ಧದ ಹೋರಾಟಕ್ಕೆ ಹಾಗೂ ದೇಶವನ್ನು ಒಂದಾಗಿಸುವುದಕ್ಕೆ ದಾರಿ ತೋರಿಸುವ ಕೆಲಸ ಮಾಡುವುದು ಬಂಗಾಳ ಮತ್ತು ಬಂಗಾಳಿಗಳ ಕರ್ತವ್ಯ’ ಎಂದರು.</p>.<p>‘ಅಸಾಧಾರಣ ಸಂದರ್ಭ ಎದುರಾದಾಗ ಅದಕ್ಕೆ ಅಗತ್ಯವಾದ ಪ್ರತಿಕ್ರಿಯೆ ನೀಡದೆ ಇದ್ದಲ್ಲಿ ಜನ ನಿಮ್ಮನ್ನು ಯಾವತ್ತಿಗೂ ಕ್ಷಮಿಸುವುದಿಲ್ಲ’ ಎಂದು ರಾಹುಲ್ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲಿಗುರಿ (ಪಶ್ಚಿಮ ಬಂಗಾಳ)</strong>: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಾದ್ಯಂತ ದ್ವೇಷ ಮತ್ತು ಹಿಂಸೆಯನ್ನು ಹರಡುವ ಕೆಲಸ ಮಾಡುತ್ತಿದೆ. ಬಡವರು ಮತ್ತು ಯುವಕರ ಹಿತವನ್ನು ಕಡೆಗಣಿಸಿ ಬೃಹತ್ ಕಾರ್ಪೊರೇಟ್ ಸಂಸ್ಥೆಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದರು.</p>.<p>‘ಅಲ್ಪಾವಧಿ ನೇಮಕಾತಿಯ ಅಗ್ನಿವೀರ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳನ್ನು ಸೇರಬಯಸಿದ್ದ ಯುವಕರನ್ನು ಅಣಕಿಸುವ ಕೆಲಸ ಮಾಡಿದೆ’ ಎಂದು ದೂರಿದರು. ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯಲ್ಲಿ ಅವರು ಸಿಲಿಗುರಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ದ್ವೇಷ ಮತ್ತು ಹಿಂಸೆಯನ್ನು ದೇಶದಾದ್ಯಂತ ಹರಡಲಾಗುತ್ತಿದೆ. ಇದು ಯಾವ ಉದ್ದೇಶವನ್ನೂ ಈಡೇರಿಸುವುದಿಲ್ಲ. ದ್ವೇಷ ಹರಡುವ ಬದಲು ನಾವು ನಮ್ಮ ಯುವಕರಿಗಾಗಿ ಪ್ರೀತಿ ಮತ್ತು ನ್ಯಾಯವನ್ನು ಹರಡುವ ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.</p>.<p>‘ಬಂಗಾಳಕ್ಕೆ ವಿಶೇಷ ಸ್ಥಾನ ಇದೆ. ಇದು ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಸೈದ್ಧಾಂತಿಕ ಹೋರಾಟಕ್ಕೆ ನಾಯಕತ್ವ ಒದಗಿಸಿದೆ. ಪ್ರಸಕ್ತ ಸಂದರ್ಭದಲ್ಲಿ ದ್ವೇಷದ ವಿರುದ್ಧದ ಹೋರಾಟಕ್ಕೆ ಹಾಗೂ ದೇಶವನ್ನು ಒಂದಾಗಿಸುವುದಕ್ಕೆ ದಾರಿ ತೋರಿಸುವ ಕೆಲಸ ಮಾಡುವುದು ಬಂಗಾಳ ಮತ್ತು ಬಂಗಾಳಿಗಳ ಕರ್ತವ್ಯ’ ಎಂದರು.</p>.<p>‘ಅಸಾಧಾರಣ ಸಂದರ್ಭ ಎದುರಾದಾಗ ಅದಕ್ಕೆ ಅಗತ್ಯವಾದ ಪ್ರತಿಕ್ರಿಯೆ ನೀಡದೆ ಇದ್ದಲ್ಲಿ ಜನ ನಿಮ್ಮನ್ನು ಯಾವತ್ತಿಗೂ ಕ್ಷಮಿಸುವುದಿಲ್ಲ’ ಎಂದು ರಾಹುಲ್ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>