<p><strong>ತಿರುವನಂತಪುರ:</strong> ಕಳೆದ ಕೆಲವು ದಿನಗಳಿಂದ ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಂದು (ಮಂಗಳವಾರ) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.</p>.<p>ತೀವ್ರ ಮಳೆ ಹಿನ್ನೆಲೆಯಲ್ಲಿ ಕೊಟ್ಟಾಯಂ, ವೈಕಂ ಮತ್ತು ಚಂಗನಾಶ್ಶೇರಿ ತಾಲ್ಲೂಕುಗಳಲ್ಲಿ ಜಿಲ್ಲಾಡಳಿತವು ರಜೆ ಘೋಷಿಸಿದೆ. ಅಲ್ಲಿ 17 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 246 ಮಂದಿ ಆಶ್ರಯ ಪಡೆದಿದ್ದಾರೆ.</p><p>ಇಂದು ಕೇರಳದ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.</p><p>ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿದ್ದು, ವಿವಿಧ ಪ್ರದೇಶಗಳು ಜಲಾವೃತಗೊಂಡು, ಮನೆಗಳ ಕಾಂಪೌಂಡ್ ಗೋಡೆಗಳು ಕುಸಿದು ಬಿದ್ದ ಘಟನೆಗಳು ವರದಿಯಾಗಿವೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.</p><p>ಭಾರಿ ಮಳೆಯಿಂದಾಗಿ ಆಲಪ್ಪುಳ ಜಿಲ್ಲೆಯ ಕುಟ್ಟನಾಡ್ ಪ್ರದೇಶದ ಎಡತುವಾ ಎಂಬ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕಳೆದ ಕೆಲವು ದಿನಗಳಿಂದ ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಂದು (ಮಂಗಳವಾರ) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.</p>.<p>ತೀವ್ರ ಮಳೆ ಹಿನ್ನೆಲೆಯಲ್ಲಿ ಕೊಟ್ಟಾಯಂ, ವೈಕಂ ಮತ್ತು ಚಂಗನಾಶ್ಶೇರಿ ತಾಲ್ಲೂಕುಗಳಲ್ಲಿ ಜಿಲ್ಲಾಡಳಿತವು ರಜೆ ಘೋಷಿಸಿದೆ. ಅಲ್ಲಿ 17 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 246 ಮಂದಿ ಆಶ್ರಯ ಪಡೆದಿದ್ದಾರೆ.</p><p>ಇಂದು ಕೇರಳದ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.</p><p>ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿದ್ದು, ವಿವಿಧ ಪ್ರದೇಶಗಳು ಜಲಾವೃತಗೊಂಡು, ಮನೆಗಳ ಕಾಂಪೌಂಡ್ ಗೋಡೆಗಳು ಕುಸಿದು ಬಿದ್ದ ಘಟನೆಗಳು ವರದಿಯಾಗಿವೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.</p><p>ಭಾರಿ ಮಳೆಯಿಂದಾಗಿ ಆಲಪ್ಪುಳ ಜಿಲ್ಲೆಯ ಕುಟ್ಟನಾಡ್ ಪ್ರದೇಶದ ಎಡತುವಾ ಎಂಬ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>