<p><strong>ಶಿಮ್ಲಾ, (ಪಿಟಿಐ):</strong> ಹಿಮಾಚಲ ಪ್ರದೇಶದ ಸೋಲನ್ ನಗರದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸುಗಂಧದ್ರವ್ಯ ತಯಾರಿಕಾ ಘಟಕವೊಂದರಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆಯು ಶನಿವಾರ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಎನ್.ಆರ್. ಆರೋಮಾಸ್ ಸಂಸ್ಥೆಯ ತಯಾರಿಕಾ ಘಟಕದಲ್ಲಿ ನಡೆದ ಅವಘಡದಲ್ಲಿ 31 ಜನರು ಗಾಯಗೊಂಡಿದ್ದು, ಕಾಣೆಯಾಗಿರುವ ಒಂಬತ್ತು ಜನರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸೋಲನ್ನ ಉಪ ಆಯುಕ್ತರು ಹೇಳಿದರು.</p>.<p>ದಹನಕಾರಿ ವಸ್ತುಗಳನ್ನು ಸುಗಂಧದ್ರವ್ಯ ತಯಾರಿಕೆಗೆ ಬಳಸಲಾಗುತ್ತದೆ. ಹೀಗಾಗಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಇನ್ನೂ ಪ್ರಯತ್ನ ನಡೆಸಿದ್ದಾರೆ ಎಂದರು.</p>.<p>ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 285 (ನಿರ್ಲಕ್ಷ್ಯ), 335 (ಪ್ರಣಾಪಾಯ ಉಂಟುಮಾಡುವ), 337 (ಭಾದೆ ಉಂಟುಮಾಡುವ ಮತ್ತು ಕೊಲೆಯಲ್ಲದ ಶಿಕ್ಷಾರ್ಹ ನರಹತ್ಯೆ) ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.</p>.<p>ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ. ಮ್ಯಾಜಿಸ್ಟೆರಿಯಲ್ ತನಿಖೆಗೆ ಆದೇಶಿಸಲಾಗಿದೆ. ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ, (ಪಿಟಿಐ):</strong> ಹಿಮಾಚಲ ಪ್ರದೇಶದ ಸೋಲನ್ ನಗರದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸುಗಂಧದ್ರವ್ಯ ತಯಾರಿಕಾ ಘಟಕವೊಂದರಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆಯು ಶನಿವಾರ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಎನ್.ಆರ್. ಆರೋಮಾಸ್ ಸಂಸ್ಥೆಯ ತಯಾರಿಕಾ ಘಟಕದಲ್ಲಿ ನಡೆದ ಅವಘಡದಲ್ಲಿ 31 ಜನರು ಗಾಯಗೊಂಡಿದ್ದು, ಕಾಣೆಯಾಗಿರುವ ಒಂಬತ್ತು ಜನರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸೋಲನ್ನ ಉಪ ಆಯುಕ್ತರು ಹೇಳಿದರು.</p>.<p>ದಹನಕಾರಿ ವಸ್ತುಗಳನ್ನು ಸುಗಂಧದ್ರವ್ಯ ತಯಾರಿಕೆಗೆ ಬಳಸಲಾಗುತ್ತದೆ. ಹೀಗಾಗಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಇನ್ನೂ ಪ್ರಯತ್ನ ನಡೆಸಿದ್ದಾರೆ ಎಂದರು.</p>.<p>ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 285 (ನಿರ್ಲಕ್ಷ್ಯ), 335 (ಪ್ರಣಾಪಾಯ ಉಂಟುಮಾಡುವ), 337 (ಭಾದೆ ಉಂಟುಮಾಡುವ ಮತ್ತು ಕೊಲೆಯಲ್ಲದ ಶಿಕ್ಷಾರ್ಹ ನರಹತ್ಯೆ) ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.</p>.<p>ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ. ಮ್ಯಾಜಿಸ್ಟೆರಿಯಲ್ ತನಿಖೆಗೆ ಆದೇಶಿಸಲಾಗಿದೆ. ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>