<p><strong>ನವದೆಹಲಿ</strong>: ಪದ್ಮಶ್ರೀ ಪುರಸ್ಕೃತ ಖ್ಯಾತ ಘಜಲ್ ಗಾಯಕ ಪಂಕಜ್ ಉಧಾಸ್ ನಿಧನಕ್ಕೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.</p><p>‘ಪಂಕಜ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು. ತಮ್ಮ ಸ್ವರದ ಮೂಲಕ ವಿವಿಧ ಭಾವನೆಗಳನ್ನು ವ್ಯಕ್ತಪಡಿಸುವ ಶಕ್ತಿ ಅವರಿಗಿತ್ತು. ಅವರ ಘಜಲ್ಗಳು ನಮ್ಮ ಅಂತರಾಳಕ್ಕೆ ಮುಟ್ಟುತ್ತಿದ್ದವು’ ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>‘ಪಂಕಜ್ ಅವರೊಂದಿಗೆ ನಡೆಸಿದ ಸಂವಾದಗಳು ನನ್ನ ನೆನಪಿನಂಗಳದಿಂದ ಮಾಸಿಲ್ಲ. ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಹೇಳಿದರು.</p><p>‘ತಮ್ಮ ಸುಮಧುರ ಕಂಠದಿಂದ ಲಕ್ಷಾಂತರ ಕೇಳುಗರ ಹೃದಯವನ್ನು ಪಂಕಜ್ ಉಧಾಸ್ ಅವರು ಗೆದ್ದುಕೊಂಡಿದ್ದರು. ತಮ್ಮ ಸಾಧನೆ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪದ್ಮಶ್ರೀ ಪುರಸ್ಕೃತ ಖ್ಯಾತ ಘಜಲ್ ಗಾಯಕ ಪಂಕಜ್ ಉಧಾಸ್ ನಿಧನಕ್ಕೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.</p><p>‘ಪಂಕಜ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು. ತಮ್ಮ ಸ್ವರದ ಮೂಲಕ ವಿವಿಧ ಭಾವನೆಗಳನ್ನು ವ್ಯಕ್ತಪಡಿಸುವ ಶಕ್ತಿ ಅವರಿಗಿತ್ತು. ಅವರ ಘಜಲ್ಗಳು ನಮ್ಮ ಅಂತರಾಳಕ್ಕೆ ಮುಟ್ಟುತ್ತಿದ್ದವು’ ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>‘ಪಂಕಜ್ ಅವರೊಂದಿಗೆ ನಡೆಸಿದ ಸಂವಾದಗಳು ನನ್ನ ನೆನಪಿನಂಗಳದಿಂದ ಮಾಸಿಲ್ಲ. ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಹೇಳಿದರು.</p><p>‘ತಮ್ಮ ಸುಮಧುರ ಕಂಠದಿಂದ ಲಕ್ಷಾಂತರ ಕೇಳುಗರ ಹೃದಯವನ್ನು ಪಂಕಜ್ ಉಧಾಸ್ ಅವರು ಗೆದ್ದುಕೊಂಡಿದ್ದರು. ತಮ್ಮ ಸಾಧನೆ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>