<p><strong>ನವದೆಹಲಿ</strong>: ‘ಸುಪ್ರೀಂ ಕೋರ್ಟ್ನ ಕಟ್ಟಡ ಸಂಕೀರ್ಣದ ವಿಸ್ತರಣೆಗಾಗಿ ಕೇಂದ್ರ ಸರ್ಕಾರವು ₹ 800 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ’ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇಲ್ಲಿ ಹೇಳಿದರು.</p>.<p>ಸುಪ್ರೀಂ ಕೋರ್ಟ್ನ ವಜ್ರ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸುಲಲಿತ ನ್ಯಾಯವು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕು. ಸುಪ್ರೀಂ ಕೋರ್ಟ್ ಇದನ್ನು ಒದಗಿಸುವ ಮಾಧ್ಯಮವಾಗಿದೆ’ ಎಂದು ತಿಳಿಸಿದರು.</p>.<p>‘ಸುಲಲಿತ ಬದುಕು, ವ್ಯವಹಾರ, ಪ್ರಯಾಣ, ಸಂವಹನವು ಸೇರಿದಂತೆ ಸುಲಲಿತ ನ್ಯಾಯವು ದೇಶದ ಪ್ರಮುಖ ಆದ್ಯತೆಗಳಾಗಿವೆ’ ಎಂದು ಮೋದಿ ಉಲ್ಲೇಖಿಸಿದರು.</p>.<p>‘ದೇಶದಲ್ಲಿನ ಸಂಪೂರ್ಣ ನ್ಯಾಯ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸುಪ್ರೀಂ ಕೋರ್ಟ್, ಮಾರ್ಗದರ್ಶನವನ್ನು ನೀಡುತ್ತಿದೆ. ಎಲ್ಲ ಭಾಗಕ್ಕೂ ನ್ಯಾಯಾಲಯವು ಪ್ರವೇಶಿಸುವ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ನೀಡುತ್ತಿದೆ. ಇ ಕೋರ್ಟ್ ಮಿಷನ್ ಯೋಜನೆಯ ಮೂರನೇ ಹಂತಕ್ಕೆ ಒಪ್ಪಿಗೆ ನೀಡಲಾಗುವುದು. ಮೂರನೇ ಹಂತದ ಅನುದಾನ ಹಂಚಿಕೆಯು ಎರಡನೇ ಹಂತಕ್ಕಿಂತ ನಾಲ್ಕು ಪಟ್ಟು ಹೆಚ್ಚಿರಲಿದೆ’ ಎಂದು ಅವರು ಹೇಳಿದರು.</p>.<p>ದೇಶದ ಎಲ್ಲಾ ನ್ಯಾಯಾಲಯಗಳ ಡಿಜಿಟಲೀಕರಣವನ್ನು ಮುಖ್ಯ ನ್ಯಾಯಮೂರ್ತಿಯವರೇ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.</p>.<p>‘ಹಳೆಯದರಿಂದ ಹೊಸದಕ್ಕೆ ತಡೆರಹಿತ ವರ್ಗಾವಣೆಯನ್ನು ಖಾತ್ರಿಪಡಿಸಲು ಎಲ್ಲ ಮಧ್ಯಸ್ಥಗಾರರ ಸಾಮರ್ಥ್ಯ ವರ್ಧನೆಯಲ್ಲಿ ತೊಡಗಿಸಿಕೊಳ್ಳುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಮತ್ತು ಸುಪ್ರೀಂ ಕೋರ್ಟ್ಗೂ ಇದೆ’ ಎಂದು ಅವರು ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸುಪ್ರೀಂ ಕೋರ್ಟ್ನ ಕಟ್ಟಡ ಸಂಕೀರ್ಣದ ವಿಸ್ತರಣೆಗಾಗಿ ಕೇಂದ್ರ ಸರ್ಕಾರವು ₹ 800 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ’ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇಲ್ಲಿ ಹೇಳಿದರು.</p>.<p>ಸುಪ್ರೀಂ ಕೋರ್ಟ್ನ ವಜ್ರ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸುಲಲಿತ ನ್ಯಾಯವು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕು. ಸುಪ್ರೀಂ ಕೋರ್ಟ್ ಇದನ್ನು ಒದಗಿಸುವ ಮಾಧ್ಯಮವಾಗಿದೆ’ ಎಂದು ತಿಳಿಸಿದರು.</p>.<p>‘ಸುಲಲಿತ ಬದುಕು, ವ್ಯವಹಾರ, ಪ್ರಯಾಣ, ಸಂವಹನವು ಸೇರಿದಂತೆ ಸುಲಲಿತ ನ್ಯಾಯವು ದೇಶದ ಪ್ರಮುಖ ಆದ್ಯತೆಗಳಾಗಿವೆ’ ಎಂದು ಮೋದಿ ಉಲ್ಲೇಖಿಸಿದರು.</p>.<p>‘ದೇಶದಲ್ಲಿನ ಸಂಪೂರ್ಣ ನ್ಯಾಯ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸುಪ್ರೀಂ ಕೋರ್ಟ್, ಮಾರ್ಗದರ್ಶನವನ್ನು ನೀಡುತ್ತಿದೆ. ಎಲ್ಲ ಭಾಗಕ್ಕೂ ನ್ಯಾಯಾಲಯವು ಪ್ರವೇಶಿಸುವ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ನೀಡುತ್ತಿದೆ. ಇ ಕೋರ್ಟ್ ಮಿಷನ್ ಯೋಜನೆಯ ಮೂರನೇ ಹಂತಕ್ಕೆ ಒಪ್ಪಿಗೆ ನೀಡಲಾಗುವುದು. ಮೂರನೇ ಹಂತದ ಅನುದಾನ ಹಂಚಿಕೆಯು ಎರಡನೇ ಹಂತಕ್ಕಿಂತ ನಾಲ್ಕು ಪಟ್ಟು ಹೆಚ್ಚಿರಲಿದೆ’ ಎಂದು ಅವರು ಹೇಳಿದರು.</p>.<p>ದೇಶದ ಎಲ್ಲಾ ನ್ಯಾಯಾಲಯಗಳ ಡಿಜಿಟಲೀಕರಣವನ್ನು ಮುಖ್ಯ ನ್ಯಾಯಮೂರ್ತಿಯವರೇ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.</p>.<p>‘ಹಳೆಯದರಿಂದ ಹೊಸದಕ್ಕೆ ತಡೆರಹಿತ ವರ್ಗಾವಣೆಯನ್ನು ಖಾತ್ರಿಪಡಿಸಲು ಎಲ್ಲ ಮಧ್ಯಸ್ಥಗಾರರ ಸಾಮರ್ಥ್ಯ ವರ್ಧನೆಯಲ್ಲಿ ತೊಡಗಿಸಿಕೊಳ್ಳುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಮತ್ತು ಸುಪ್ರೀಂ ಕೋರ್ಟ್ಗೂ ಇದೆ’ ಎಂದು ಅವರು ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>