ರಾಜ್ಯಕ್ಕೆ ಸಮಗ್ರ ಮತ್ತು ಸಹಾನುಭೂತಿಯ ಪರಿಹಾರ, ಪುನರ್ವಸತಿ, ಅಲ್ಪಾವಧಿಯ ಪರಿಹಾರ ಮತ್ತು ದೀರ್ಘಾವಧಿಯಲ್ಲಿ ಪ್ರವಾಹವನ್ನು ನಿಯಂತ್ರಿಸಲು ನಿರ್ವಹಣಾ ಪ್ರಾಧಿಕಾರದ ಅಗ್ಯತವಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಸಂಭವಿಸಿರುವ ಪ್ರವಾಹದಿಂದಾಗಿ 24 ಲಕ್ಷ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. 53 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ ಹಾಗೂ 60ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ನಾಯಕರೊಬ್ಬರು ನನಗೆ ತಿಳಿಸಿದರು ಎಂದು ರಾಹುಲ್ ಹೇಳಿದ್ದಾರೆ.
ಈ ಅಂಕಿಅಂಶಗಳು ಪ್ರವಾಹ ಮುಕ್ತ ಅಸ್ಸಾಂನ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಅವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಕಿಡಿಕಾರಿದ್ದಾರೆ.