‘ಅರಣ್ಯ ವ್ಯಾಪ್ತಿಯಲ್ಲಿರುವ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಶನಿವಾರ ದಾಳಿ ನಡೆಸಿ, ಎರಡು ಟ್ರ್ಯಾಕ್ಟರ್ ಟ್ರಾಲಿಗಳನ್ನು ಜಪ್ತಿ ಮಾಡಲಾಗಿತ್ತು. ಈ ವೇಳೆ ಶೈಲೇಂದ್ರ ಸಿಂಗ್ ಎಂಬಾತ ಅಧಿಕಾರಿಗಳ ಮೇಲೆ ಟ್ರ್ಯಾಕ್ಟರ್ ಟ್ರಾಲಿ ಹರಿಸಲು ಯತ್ನಿಸಿದ್ದಾನೆ’ ಎಂದು ಅರಣ್ಯಾಧಿಕಾರಿ ರಾಜೇಂದ್ರ ಪಸ್ತಾರ್ ಅವರು ಭಾನುವಾರ ತಿಳಿಸಿದ್ದಾರೆ.