<p>ನವದೆಹಲಿ (ಪಿಟಿಐ): ‘ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪತ್ರಿಕೆಯೊಂದಕ್ಕೆ ಬರೆದಿರುವ ಲೇಖನವು ಅಸಂಬದ್ಧವಾಗಿದೆ. ಅವರ ಹೇಳಿಕೆಯು ಭ್ರಮೆಯಿಂದ ಕೂಡಿದೆ. ಅದು ಮೋದಿ ವಿರುದ್ಧದ ದ್ವೇಷಕ್ಕೆ ಹಿಡಿದ ಕೈಗನ್ನಡಿಯಂತಿದೆ’ ಎಂದು ಬಿಜೆಪಿ ಮಂಗಳವಾರ ಟೀಕಿಸಿದೆ.</p>.<p>‘ದಿ ಹಿಂದೂ’ ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಪ್ರಜಾಪ್ರಭುತ್ವ ಮತ್ತು ವಿವಿಧ ಸಂಸ್ಥೆಗಳ ಸ್ವಾತಂತ್ರ್ಯದ ಕುರಿತು ಬರೆದಿರುವ ಸೋನಿಯಾ ಅವರು ನರೇಂದ್ರ ಮೋದಿ ಸರ್ಕಾರವು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ. </p>.<p>‘ಪ್ರಧಾನಿ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ನಾಶಗೊಳಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅವರಲ್ಲಿ ತಿರಸ್ಕಾರ ಭಾವ ಗಾಢವಾಗಿ ಬೇರೂರಿದೆ. ಅದು ಅವರ ಕೆಲಸಗಳಲ್ಲಿ ಎದ್ದು ಕಾಣುತ್ತಿದೆ’ ಎಂದೂ ಆರೋಪಿಸಿದ್ದಾರೆ. </p>.<p>‘ಸೋನಿಯಾ ಅವರು ಪ್ರಜಾಪ್ರಭುತ್ವದ ಕುರಿತು ಉಪನ್ಯಾಸ ನೀಡುತ್ತಿದ್ದಾರೆಯೇ? ಕಾಂಗ್ರೆಸ್ ಪಕ್ಷವು ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಮಾತನಾಡುತ್ತಿದೆಯೇ. ಇದು ಭ್ರಮೆಯ ಹೇಳಿಕೆ’ ಎಂದು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.</p>.<p>‘ದಾರಿ ತಪ್ಪಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಈ ದೇಶವಲ್ಲ. ಈ ದೇಶದ ಅತಿ ಹಳೆಯ ಪಕ್ಷವು ರಾಜಕೀಯ ಬಿಕ್ಕಟ್ಟಿನ ಅಂಚಿನಲ್ಲಿದೆ. ಮುಂಬರುವ ದಿನಗಳು ಆ ಪಕ್ಷದ ಪಾಲಿಗೆ ನಿರ್ಣಾಯಕವೆನಿಸಿವೆ’ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ‘ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪತ್ರಿಕೆಯೊಂದಕ್ಕೆ ಬರೆದಿರುವ ಲೇಖನವು ಅಸಂಬದ್ಧವಾಗಿದೆ. ಅವರ ಹೇಳಿಕೆಯು ಭ್ರಮೆಯಿಂದ ಕೂಡಿದೆ. ಅದು ಮೋದಿ ವಿರುದ್ಧದ ದ್ವೇಷಕ್ಕೆ ಹಿಡಿದ ಕೈಗನ್ನಡಿಯಂತಿದೆ’ ಎಂದು ಬಿಜೆಪಿ ಮಂಗಳವಾರ ಟೀಕಿಸಿದೆ.</p>.<p>‘ದಿ ಹಿಂದೂ’ ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಪ್ರಜಾಪ್ರಭುತ್ವ ಮತ್ತು ವಿವಿಧ ಸಂಸ್ಥೆಗಳ ಸ್ವಾತಂತ್ರ್ಯದ ಕುರಿತು ಬರೆದಿರುವ ಸೋನಿಯಾ ಅವರು ನರೇಂದ್ರ ಮೋದಿ ಸರ್ಕಾರವು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ. </p>.<p>‘ಪ್ರಧಾನಿ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ನಾಶಗೊಳಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅವರಲ್ಲಿ ತಿರಸ್ಕಾರ ಭಾವ ಗಾಢವಾಗಿ ಬೇರೂರಿದೆ. ಅದು ಅವರ ಕೆಲಸಗಳಲ್ಲಿ ಎದ್ದು ಕಾಣುತ್ತಿದೆ’ ಎಂದೂ ಆರೋಪಿಸಿದ್ದಾರೆ. </p>.<p>‘ಸೋನಿಯಾ ಅವರು ಪ್ರಜಾಪ್ರಭುತ್ವದ ಕುರಿತು ಉಪನ್ಯಾಸ ನೀಡುತ್ತಿದ್ದಾರೆಯೇ? ಕಾಂಗ್ರೆಸ್ ಪಕ್ಷವು ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಮಾತನಾಡುತ್ತಿದೆಯೇ. ಇದು ಭ್ರಮೆಯ ಹೇಳಿಕೆ’ ಎಂದು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.</p>.<p>‘ದಾರಿ ತಪ್ಪಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಈ ದೇಶವಲ್ಲ. ಈ ದೇಶದ ಅತಿ ಹಳೆಯ ಪಕ್ಷವು ರಾಜಕೀಯ ಬಿಕ್ಕಟ್ಟಿನ ಅಂಚಿನಲ್ಲಿದೆ. ಮುಂಬರುವ ದಿನಗಳು ಆ ಪಕ್ಷದ ಪಾಲಿಗೆ ನಿರ್ಣಾಯಕವೆನಿಸಿವೆ’ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>