<p><strong>ಚೆನ್ನೈ</strong>: ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಆರೆಂಜ್ ಅಲರ್ಟ್ ಘೋಷಿಸಿದೆ.</p>.<p>ಮಳೆಯಿಂದ ಆಗಬಹುದಾದ ಹಾನಿಯನ್ನು ನಿಭಾಯಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡಿನ 12 ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಐಎಂಡಿ ಸೂಚಿಸಿದೆ.</p>.<p>ತಿರುವಳ್ಳೂರ್, ಚೆನ್ನೈ, ಕಾಂಚೀಪುರಂ, ರಾಣಿಪೇಟ್, ಚೆಂಗಾಲಪಟ್ಟು, ವಿಲ್ಲುಪುರಂ, ಕಡಾಲೋರ್ ಹಾಗೂ ಮೈಲಾದುದುರೈ ಜಿಲ್ಲೆಗಳಲ್ಲಿ ಡಿಸೆಂಬರ್ 4ರವರೆಗೆ ವಿಪರೀತ ಮಳೆಯಾಗುವ ಸಾಧ್ಯತೆ ಇದೆ. ವೆಲ್ಲೋರ್, ತಿರುವಣ್ಣಾಮಲೈ, ಕಲ್ಲಕುರಿಚಿ, ಪೆರಂಬಲೂರ್, ಅರಿಯಾಲೂರ್, ತಿರುವರೂರ್ ಹಾಗೂ ನಾಗಪಟ್ಟಣಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.</p>.<p>ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡಿಗೆ ಡಿಸೆಂಬರ್ 4ರಂದು ಚಂಡಮಾರುತ ಅಪ್ಪಳಿಸಲಿದೆ. ನಂತರ ಅದು ಉತ್ತರಾಭಿಮುಖವಾಗಿ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯೆಡೆಗೆ ಚಲಿಸಲಿದೆ. ನಂತರ ಡಿಸೆಂಬರ್ 5ರಂದು ನೆಲ್ಲೂರು ಮತ್ತು ಮಚಲಿಪಟ್ಟಣಂ ಮೂಲಕ ದಕ್ಷಿಣ ಆಂಧ್ರಪ್ರದೇಶವನ್ನು ದಾಟಲಿದೆ. ಈ ವೇಳೆ ಗಾಳಿ ವೇಗ 80–90 ಕಿ.ಮೀ ಇರಲಿದೆ ಎಂದು ಅದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಆರೆಂಜ್ ಅಲರ್ಟ್ ಘೋಷಿಸಿದೆ.</p>.<p>ಮಳೆಯಿಂದ ಆಗಬಹುದಾದ ಹಾನಿಯನ್ನು ನಿಭಾಯಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡಿನ 12 ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಐಎಂಡಿ ಸೂಚಿಸಿದೆ.</p>.<p>ತಿರುವಳ್ಳೂರ್, ಚೆನ್ನೈ, ಕಾಂಚೀಪುರಂ, ರಾಣಿಪೇಟ್, ಚೆಂಗಾಲಪಟ್ಟು, ವಿಲ್ಲುಪುರಂ, ಕಡಾಲೋರ್ ಹಾಗೂ ಮೈಲಾದುದುರೈ ಜಿಲ್ಲೆಗಳಲ್ಲಿ ಡಿಸೆಂಬರ್ 4ರವರೆಗೆ ವಿಪರೀತ ಮಳೆಯಾಗುವ ಸಾಧ್ಯತೆ ಇದೆ. ವೆಲ್ಲೋರ್, ತಿರುವಣ್ಣಾಮಲೈ, ಕಲ್ಲಕುರಿಚಿ, ಪೆರಂಬಲೂರ್, ಅರಿಯಾಲೂರ್, ತಿರುವರೂರ್ ಹಾಗೂ ನಾಗಪಟ್ಟಣಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.</p>.<p>ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡಿಗೆ ಡಿಸೆಂಬರ್ 4ರಂದು ಚಂಡಮಾರುತ ಅಪ್ಪಳಿಸಲಿದೆ. ನಂತರ ಅದು ಉತ್ತರಾಭಿಮುಖವಾಗಿ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯೆಡೆಗೆ ಚಲಿಸಲಿದೆ. ನಂತರ ಡಿಸೆಂಬರ್ 5ರಂದು ನೆಲ್ಲೂರು ಮತ್ತು ಮಚಲಿಪಟ್ಟಣಂ ಮೂಲಕ ದಕ್ಷಿಣ ಆಂಧ್ರಪ್ರದೇಶವನ್ನು ದಾಟಲಿದೆ. ಈ ವೇಳೆ ಗಾಳಿ ವೇಗ 80–90 ಕಿ.ಮೀ ಇರಲಿದೆ ಎಂದು ಅದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>