<p><strong>ನವದೆಹಲಿ:</strong> ನಮ್ಮ ದೇಶದ ಕುಶಲತೆ ಹೊಂದಿದ ಕಾರ್ಮಿಕರ ಕೊರತೆಯನ್ನು ನೀಗಿಸಲು ಭಾರತ ಸಹಾಯ ಮಾಡುತ್ತಿದೆ ಎಂದು ಜರ್ಮನಿಯ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್ಬಾಕ್ ಹೇಳಿದ್ದಾರೆ. </p><p>ನಗರದ ಗೋಥೆ ಇನ್ಸ್ಟಿಟ್ಯೂಟ್ ಹಾಗೂ ಮ್ಯಾಕ್ಸ್ ಮುಲ್ಲರ್ ಭವನದಲ್ಲಿ ಆಯೋಜಿಸಿದ್ದ ಭಾರತೀಯ ವಿದ್ಯಾರ್ಥಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p><p>‘ಯುವ ವಿದ್ಯಾವಂತ ಭಾರತೀಯರು ಉದ್ಯೋಗಗಳನ್ನು ಗಿಟ್ಟಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ. ನಮ್ಮ ದೇಶದಲ್ಲಿ (ಜರ್ಮನಿ) ನುರಿತ ಕಾರ್ಮಿಕರ ಅವಶ್ಯಕತೆ ಇದೆ. ಹಾಗಾಗಿ ಪ್ರತಿಭಾವಂತ ಭಾರತೀಯರನ್ನು ಸ್ವಾಗತಿಸಲು ನಾವು ಸದಾ ಸಿದ್ಧರಿರುತ್ತೇವೆ’ ಎಂದು ಹೇಳಿದ್ದಾರೆ. </p><p>‘2022ರಲ್ಲಿ ಬರ್ಲಿನ್ನಲ್ಲಿ ನಡೆದಿದ್ದ ಸಮಾಲೋಚನೆಯಲ್ಲಿ ನಾವು ನಮ್ಮ ದ್ವಿಪಕ್ಷೀಯ ಸಹಕಾರಕ್ಕಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದೆವು. ಈ ಎರಡು ವರ್ಷದ ಅವಧಿಯಲ್ಲಿ ನಮ್ಮ ಕಾರ್ಯತಂತ್ರದ ಸಂಬಂಧಗಳ ವಿವಿಧ ಕ್ಷೇತ್ರಗಳಲ್ಲಿ ಪ್ರೋತ್ಸಾಹದಾಯಕ ಪ್ರಗತಿ ಕಂಡುಬಂದಿದೆ’ ಎಂದು ತಿಳಿಸಿದ್ದಾರೆ. </p><p>‘ಜರ್ಮನಿಯಲ್ಲಿ ಕುಶಲತೆ ಹೊಂದಿದ ಕಾರ್ಮಿಕರ ಕೊರತೆಯಿದ್ದು, ಭಾರತದಿಂದ ಜರ್ಮನಿಗೆ ಬರುವ ಐ.ಟಿ. ತಂತ್ರಜ್ಞರಿಗೆ ಕೆಲಸದ ವೀಸಾಗಳನ್ನು ಪಡೆಯುವುದನ್ನು ನಮ್ಮ ಸರ್ಕಾರವು ಸುಲಭಗೊಳಿಸಿದೆ’ ಎಂದು ಹೇಳಿದ್ದಾರೆ. </p><p>‘ಸಾಫ್ಟ್ವೇರ್ ಡೆವಲಪರ್ಗಳಿಗೆ ಮತ್ತು ಐ.ಟಿ ಅಭಿವೃದ್ಧಿ ಕೌಶಲ ಹೊಂದಿರುವವರಿಗೆ ಜರ್ಮನಿಯು ಹೆಚ್ಚು ಆಕರ್ಷಕವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಚೌಕಟ್ಟನ್ನು ಸುಧಾರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ’ ಎಂದೂ ಅವರು ತಿಳಿಸಿದ್ದಾರೆ. </p><p>ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ 7ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆ (ಐಜಿಸಿ) ಸಭೆಯಲ್ಲಿ ಅನ್ನಾಲೆನಾ ಬೇರ್ಬಾಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದರು. ಈ ವೇಳೆ ಜರ್ಮನಿಯ ಚಾನ್ಸಲರ್ ಓಲಾಫ್ ಶೋಲ್ಜ್ ಕೂಡ ಉಪಸ್ಥಿತರಿದ್ದರು.</p>.ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಜೊತೆ ಪ್ರಧಾನಿ ಮೋದಿ ಸಮಾಲೋಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಮ್ಮ ದೇಶದ ಕುಶಲತೆ ಹೊಂದಿದ ಕಾರ್ಮಿಕರ ಕೊರತೆಯನ್ನು ನೀಗಿಸಲು ಭಾರತ ಸಹಾಯ ಮಾಡುತ್ತಿದೆ ಎಂದು ಜರ್ಮನಿಯ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್ಬಾಕ್ ಹೇಳಿದ್ದಾರೆ. </p><p>ನಗರದ ಗೋಥೆ ಇನ್ಸ್ಟಿಟ್ಯೂಟ್ ಹಾಗೂ ಮ್ಯಾಕ್ಸ್ ಮುಲ್ಲರ್ ಭವನದಲ್ಲಿ ಆಯೋಜಿಸಿದ್ದ ಭಾರತೀಯ ವಿದ್ಯಾರ್ಥಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p><p>‘ಯುವ ವಿದ್ಯಾವಂತ ಭಾರತೀಯರು ಉದ್ಯೋಗಗಳನ್ನು ಗಿಟ್ಟಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ. ನಮ್ಮ ದೇಶದಲ್ಲಿ (ಜರ್ಮನಿ) ನುರಿತ ಕಾರ್ಮಿಕರ ಅವಶ್ಯಕತೆ ಇದೆ. ಹಾಗಾಗಿ ಪ್ರತಿಭಾವಂತ ಭಾರತೀಯರನ್ನು ಸ್ವಾಗತಿಸಲು ನಾವು ಸದಾ ಸಿದ್ಧರಿರುತ್ತೇವೆ’ ಎಂದು ಹೇಳಿದ್ದಾರೆ. </p><p>‘2022ರಲ್ಲಿ ಬರ್ಲಿನ್ನಲ್ಲಿ ನಡೆದಿದ್ದ ಸಮಾಲೋಚನೆಯಲ್ಲಿ ನಾವು ನಮ್ಮ ದ್ವಿಪಕ್ಷೀಯ ಸಹಕಾರಕ್ಕಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದೆವು. ಈ ಎರಡು ವರ್ಷದ ಅವಧಿಯಲ್ಲಿ ನಮ್ಮ ಕಾರ್ಯತಂತ್ರದ ಸಂಬಂಧಗಳ ವಿವಿಧ ಕ್ಷೇತ್ರಗಳಲ್ಲಿ ಪ್ರೋತ್ಸಾಹದಾಯಕ ಪ್ರಗತಿ ಕಂಡುಬಂದಿದೆ’ ಎಂದು ತಿಳಿಸಿದ್ದಾರೆ. </p><p>‘ಜರ್ಮನಿಯಲ್ಲಿ ಕುಶಲತೆ ಹೊಂದಿದ ಕಾರ್ಮಿಕರ ಕೊರತೆಯಿದ್ದು, ಭಾರತದಿಂದ ಜರ್ಮನಿಗೆ ಬರುವ ಐ.ಟಿ. ತಂತ್ರಜ್ಞರಿಗೆ ಕೆಲಸದ ವೀಸಾಗಳನ್ನು ಪಡೆಯುವುದನ್ನು ನಮ್ಮ ಸರ್ಕಾರವು ಸುಲಭಗೊಳಿಸಿದೆ’ ಎಂದು ಹೇಳಿದ್ದಾರೆ. </p><p>‘ಸಾಫ್ಟ್ವೇರ್ ಡೆವಲಪರ್ಗಳಿಗೆ ಮತ್ತು ಐ.ಟಿ ಅಭಿವೃದ್ಧಿ ಕೌಶಲ ಹೊಂದಿರುವವರಿಗೆ ಜರ್ಮನಿಯು ಹೆಚ್ಚು ಆಕರ್ಷಕವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಚೌಕಟ್ಟನ್ನು ಸುಧಾರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ’ ಎಂದೂ ಅವರು ತಿಳಿಸಿದ್ದಾರೆ. </p><p>ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ 7ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆ (ಐಜಿಸಿ) ಸಭೆಯಲ್ಲಿ ಅನ್ನಾಲೆನಾ ಬೇರ್ಬಾಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದರು. ಈ ವೇಳೆ ಜರ್ಮನಿಯ ಚಾನ್ಸಲರ್ ಓಲಾಫ್ ಶೋಲ್ಜ್ ಕೂಡ ಉಪಸ್ಥಿತರಿದ್ದರು.</p>.ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಜೊತೆ ಪ್ರಧಾನಿ ಮೋದಿ ಸಮಾಲೋಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>