<p><strong>ನವದೆಹಲಿ:</strong> ಭಾರತ ಮಧ್ಯಸ್ಥಿಕೆ ವಹಿಸುವ ಮೂಲಕ ಗಾಜಾ ಮತ್ತು ಉಕ್ರೇನ್ನಲ್ಲಿನ ಯುದ್ಧವನ್ನು ನಿಲ್ಲಿಸಬೇಕು. ಏಕೆಂದರೆ ವಿಶ್ವದಲ್ಲಿ ಮಾನವೀಯ ಧೋರಣೆಗೆ ಭಾರತಕ್ಕಿಂತ ಉತ್ತಮ ಉದಾಹರಣೆ ಮತ್ತೊಂದಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಮೌಲಾನಾ ಮೊಹಿಬುಲ್ಲಾ ನದ್ವಿ ಹೇಳಿದರು.</p>.<p>‘ಪಿಟಿಐ’ನೊಂದಿಗೆ ಮಾತನಾಡಿದ ಅವರು, ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ಮೇಲಿನ ದೌರ್ಜನ್ಯದ ಬಗ್ಗೆ ಜಗತ್ತು ಕಣ್ಣು ಮುಚ್ಚಿ ಕುಳಿತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಗಾಜಾದಲ್ಲಿ ಯುದ್ಧವನ್ನು ನಿಲ್ಲಿಸಲು ಭಾರತ ಮಧ್ಯಪ್ರವೇಶಿಸಬೇಕು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ ಹಾಗೂ ಮೌಲಾನಾ ಅಬ್ದುಲ್ ಕಲಾಂ ಅವರಂತೆ ನಾವು ತುಳಿತಕ್ಕೊಳಗಾದವರ ಪರವಾಗಿ ನಿಲ್ಲಬೇಕಾಗಿದೆ ಎಂದರು.</p>.<p>‘ಹೇಗೆ ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬ ಭಾರತೀಯನಿಗೂ ಈ ದೇಶದ ಮೇಲೆ ಹಕ್ಕಿದೆಯೋ, ಅದೇ ರೀತಿ ಪ್ಯಾಲೆಸ್ಟೀನ್ನಲ್ಲಿ ಜನಿಸಿದ ಪ್ರತಿಯೊಬ್ಬ ಅರಬ್ಬನಿಗೂ ಪ್ಯಾಲೆಸ್ಟೀನ್ ಮೇಲೆ ಹಕ್ಕಿದೆ' ಎಂದು ಮಹಾತ್ಮ ಗಾಂಧಿ ಹೇಳಿದ್ದನ್ನು ನದ್ವಿ ಉಲ್ಲೇಖಿಸಿದ್ದಾರೆ.</p>.<p>ಯುದ್ಧದಲ್ಲಿ ಪ್ಯಾಲೆಸ್ಟೀನಿಯನ್ನರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಪರವಾಗಿ ಮಾತನಾಡದಿರುವುದು ಇಡೀ ಮಾನವಕುಲಕ್ಕೆ ನಷ್ಟ ಎಂದರು.</p>.ಯುದ್ಧ ನಿಲ್ಲಿಸಲು ವಿಶ್ವ ಶಕ್ತಿಗಳಿಗೆ ಚೀನಾ ಅಧ್ಯಕ್ಷರ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮಧ್ಯಸ್ಥಿಕೆ ವಹಿಸುವ ಮೂಲಕ ಗಾಜಾ ಮತ್ತು ಉಕ್ರೇನ್ನಲ್ಲಿನ ಯುದ್ಧವನ್ನು ನಿಲ್ಲಿಸಬೇಕು. ಏಕೆಂದರೆ ವಿಶ್ವದಲ್ಲಿ ಮಾನವೀಯ ಧೋರಣೆಗೆ ಭಾರತಕ್ಕಿಂತ ಉತ್ತಮ ಉದಾಹರಣೆ ಮತ್ತೊಂದಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಮೌಲಾನಾ ಮೊಹಿಬುಲ್ಲಾ ನದ್ವಿ ಹೇಳಿದರು.</p>.<p>‘ಪಿಟಿಐ’ನೊಂದಿಗೆ ಮಾತನಾಡಿದ ಅವರು, ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ಮೇಲಿನ ದೌರ್ಜನ್ಯದ ಬಗ್ಗೆ ಜಗತ್ತು ಕಣ್ಣು ಮುಚ್ಚಿ ಕುಳಿತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಗಾಜಾದಲ್ಲಿ ಯುದ್ಧವನ್ನು ನಿಲ್ಲಿಸಲು ಭಾರತ ಮಧ್ಯಪ್ರವೇಶಿಸಬೇಕು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ ಹಾಗೂ ಮೌಲಾನಾ ಅಬ್ದುಲ್ ಕಲಾಂ ಅವರಂತೆ ನಾವು ತುಳಿತಕ್ಕೊಳಗಾದವರ ಪರವಾಗಿ ನಿಲ್ಲಬೇಕಾಗಿದೆ ಎಂದರು.</p>.<p>‘ಹೇಗೆ ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬ ಭಾರತೀಯನಿಗೂ ಈ ದೇಶದ ಮೇಲೆ ಹಕ್ಕಿದೆಯೋ, ಅದೇ ರೀತಿ ಪ್ಯಾಲೆಸ್ಟೀನ್ನಲ್ಲಿ ಜನಿಸಿದ ಪ್ರತಿಯೊಬ್ಬ ಅರಬ್ಬನಿಗೂ ಪ್ಯಾಲೆಸ್ಟೀನ್ ಮೇಲೆ ಹಕ್ಕಿದೆ' ಎಂದು ಮಹಾತ್ಮ ಗಾಂಧಿ ಹೇಳಿದ್ದನ್ನು ನದ್ವಿ ಉಲ್ಲೇಖಿಸಿದ್ದಾರೆ.</p>.<p>ಯುದ್ಧದಲ್ಲಿ ಪ್ಯಾಲೆಸ್ಟೀನಿಯನ್ನರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಪರವಾಗಿ ಮಾತನಾಡದಿರುವುದು ಇಡೀ ಮಾನವಕುಲಕ್ಕೆ ನಷ್ಟ ಎಂದರು.</p>.ಯುದ್ಧ ನಿಲ್ಲಿಸಲು ವಿಶ್ವ ಶಕ್ತಿಗಳಿಗೆ ಚೀನಾ ಅಧ್ಯಕ್ಷರ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>