<p><strong>ಲಖನೌ:</strong> ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.</p><p>ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.</p>.ಪ್ರಧಾನಿ ಮೋದಿ, ರಾಹುಲ್, ಖರ್ಗೆ ವಿರುದ್ಧದ ದೂರು; ಆಯೋಗದಿಂದ ಇನ್ನೂ ಕ್ರಮವಿಲ್ಲ.<p>‘ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಗಿದಿದೆ. ಇಂಡಿಯಾ ಒಕ್ಕೂಟವು ಭದ್ರ ಸ್ಥಾನದಲ್ಲಿದೆ. ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ’ ಎಂದು ಹೇಳಿದರು.</p><p>‘ಇವರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ನಾಲ್ಕನೇ ಮೂರು ಬಹುಮತ ಬೇಕು ಎಂದು ಆರ್ಎಸ್ಎಸ್ ನಾಯಕ ಮೋಹನ್ ಭಾಗವತ್ ಕರ್ನಾಟಕದಲ್ಲಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ಮಂದಿ ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಮೋದಿ ಯಾಕೆ ಕ್ರಮ ತೆಗೆದುಕೊಂಡಿಲ್ಲ‘ ಎಂದು ಖರ್ಗೆ ಪ್ರಶ್ನಿಸಿದರು.</p>.ಸಂಪಾದಕೀಯ | ಖರ್ಗೆ ಪತ್ರಕ್ಕೆ ಆಯೋಗದ ಉತ್ತರ: ಬೆದರಿಕೆಯ ಧಾಟಿ ಸರಿಯಲ್ಲ. <p>ಬಡವರಿಗೆ ಆಹಾರ ಸಿಗುವಂತಾಗಲು ಕಾಂಗ್ರೆಸ್ ಕಾನೂನು ತಂದಿದೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ 10 ಕೆ.ಜಿ ಉಚಿತ ಅಕ್ಕಿ ನೀಡಲಾಗುವುದು ಎಂದರು. </p> .LS Polls | ಮೋದಿ ಸುಳ್ಳುಗಾರ, ಮತ್ತೆ ಪ್ರಧಾನಿಯಾದರೆ ಚುನಾವಣೆ ನಡೆಯದು: ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.</p><p>ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.</p>.ಪ್ರಧಾನಿ ಮೋದಿ, ರಾಹುಲ್, ಖರ್ಗೆ ವಿರುದ್ಧದ ದೂರು; ಆಯೋಗದಿಂದ ಇನ್ನೂ ಕ್ರಮವಿಲ್ಲ.<p>‘ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಗಿದಿದೆ. ಇಂಡಿಯಾ ಒಕ್ಕೂಟವು ಭದ್ರ ಸ್ಥಾನದಲ್ಲಿದೆ. ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ’ ಎಂದು ಹೇಳಿದರು.</p><p>‘ಇವರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ನಾಲ್ಕನೇ ಮೂರು ಬಹುಮತ ಬೇಕು ಎಂದು ಆರ್ಎಸ್ಎಸ್ ನಾಯಕ ಮೋಹನ್ ಭಾಗವತ್ ಕರ್ನಾಟಕದಲ್ಲಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ಮಂದಿ ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಮೋದಿ ಯಾಕೆ ಕ್ರಮ ತೆಗೆದುಕೊಂಡಿಲ್ಲ‘ ಎಂದು ಖರ್ಗೆ ಪ್ರಶ್ನಿಸಿದರು.</p>.ಸಂಪಾದಕೀಯ | ಖರ್ಗೆ ಪತ್ರಕ್ಕೆ ಆಯೋಗದ ಉತ್ತರ: ಬೆದರಿಕೆಯ ಧಾಟಿ ಸರಿಯಲ್ಲ. <p>ಬಡವರಿಗೆ ಆಹಾರ ಸಿಗುವಂತಾಗಲು ಕಾಂಗ್ರೆಸ್ ಕಾನೂನು ತಂದಿದೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ 10 ಕೆ.ಜಿ ಉಚಿತ ಅಕ್ಕಿ ನೀಡಲಾಗುವುದು ಎಂದರು. </p> .LS Polls | ಮೋದಿ ಸುಳ್ಳುಗಾರ, ಮತ್ತೆ ಪ್ರಧಾನಿಯಾದರೆ ಚುನಾವಣೆ ನಡೆಯದು: ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>