<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಹಲವಾರು ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದ ಲಷ್ಕರ್–ಇ–ತಯಬಾ ಉಗ್ರ ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ರಾಜ್ಯ ತನಿಖಾ ಸಂಸ್ಥೆಯು (ಎಸ್ಐಎ) ಶುಕ್ರವಾರ ಪೂರಕ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೊಹಮ್ಮದ್ ಖಾಸಿಮ್ ಅಲಿಯಾಸ್ ಸಲ್ಮಾನ್ ಮತ್ತು ತಾಲಿಬ್ ಹುಸೇನ್ ಶಾ ಎಂಬುವವರ ವಿರುದ್ಧ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲಾಗಿದೆ. 1990ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಖಾಸಿಮ್, ಅಲ್ಲಿ ಸಶ್ತ್ರಾಸ್ತ್ರ ಬಳಕೆ ತರಬೇತಿ ಪಡೆದಿದ್ದ. ತಾಲಿಬ್ನನ್ನು ಈ ಹಿಂದೆ ಸಶ್ತ್ರಾಸ್ತ್ರಗಳ ಜೊತೆಯೇ ಬಂಧಿಸಲಾಗಿತ್ತು ಎಂದು ತನಿಖಾ ಸಂಸ್ಥೆ ತಿಳಿಸಿದೆ.</p>.<p>ಕೊಲೆ, ಗ್ರನೇಡ್ ದಾಳಿ ಮತ್ತು ಜನನಿಬಿಡ ಸ್ಥಳಗಳಲ್ಲಿ ಕಚ್ಚಾ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಎಸಗಿರುವ ಉಗ್ರ ಕೃತ್ಯಗಳಿಂದ ಸರ್ಕಾರದ ಸ್ವತ್ತುಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಕಳೆದ ವರ್ಷ ಡಿಸೆಂಬರ್ 29ರಂದು ಇವರಿಬ್ಬರ ವಿರುದ್ಧ ಎಸ್ಐಎ ಆರೋಪಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಹಲವಾರು ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದ ಲಷ್ಕರ್–ಇ–ತಯಬಾ ಉಗ್ರ ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ರಾಜ್ಯ ತನಿಖಾ ಸಂಸ್ಥೆಯು (ಎಸ್ಐಎ) ಶುಕ್ರವಾರ ಪೂರಕ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೊಹಮ್ಮದ್ ಖಾಸಿಮ್ ಅಲಿಯಾಸ್ ಸಲ್ಮಾನ್ ಮತ್ತು ತಾಲಿಬ್ ಹುಸೇನ್ ಶಾ ಎಂಬುವವರ ವಿರುದ್ಧ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲಾಗಿದೆ. 1990ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಖಾಸಿಮ್, ಅಲ್ಲಿ ಸಶ್ತ್ರಾಸ್ತ್ರ ಬಳಕೆ ತರಬೇತಿ ಪಡೆದಿದ್ದ. ತಾಲಿಬ್ನನ್ನು ಈ ಹಿಂದೆ ಸಶ್ತ್ರಾಸ್ತ್ರಗಳ ಜೊತೆಯೇ ಬಂಧಿಸಲಾಗಿತ್ತು ಎಂದು ತನಿಖಾ ಸಂಸ್ಥೆ ತಿಳಿಸಿದೆ.</p>.<p>ಕೊಲೆ, ಗ್ರನೇಡ್ ದಾಳಿ ಮತ್ತು ಜನನಿಬಿಡ ಸ್ಥಳಗಳಲ್ಲಿ ಕಚ್ಚಾ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಎಸಗಿರುವ ಉಗ್ರ ಕೃತ್ಯಗಳಿಂದ ಸರ್ಕಾರದ ಸ್ವತ್ತುಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಕಳೆದ ವರ್ಷ ಡಿಸೆಂಬರ್ 29ರಂದು ಇವರಿಬ್ಬರ ವಿರುದ್ಧ ಎಸ್ಐಎ ಆರೋಪಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>