<p><strong>ರಾಂಚಿ:</strong> ಉತ್ತರ ಭಾರತ ಮತ್ತು ಈಶಾನ್ಯ ಭಾರತದ ಹಲವೆಡೆ ಬಿಸಿಲಿನ ಶಾಖ ಏರುತ್ತಿದ್ದು, ಜಾರ್ಖಂಡ್ನಲ್ಲಿ ಶಾಖಾಘಾತಕ್ಕೆ 4 ಮಂದಿ ಸಾವಿಗೀಡಾಗಿದ್ದಾರೆ. 1,326 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶಾಖಾಘಾತಕ್ಕೆ ಒಳಗಾದ ರೋಗಿಗಳಿಗಾಗಿ ಎಲ್ಲ ಜಿಲ್ಲಾಸ್ಪತ್ರೆಗಳು ಮತ್ತು ಇತರೆ ಆಸ್ಪತ್ರೆಗಳಲ್ಲಿ ಹವಾ ನಿಯಂತ್ರಿತ ಕೊಠಡಿಗಳು ಮತ್ತು ಖಾಲಿ ಬೆಡ್ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.</p><p>ಪಲಮುವಿನಲ್ಲಿ ಮೂವರು ಮತ್ತು ಜೆಮ್ಶೆಡ್ಪುರದಲ್ಲಿ ಒಬ್ಬರು ಶಾಖಾಘಾತಕ್ಕೆ ಬಲಿಯಾಗಿದ್ದಾರೆ. ಇವರಲ್ಲಿ ಯಾರೂ ಸಹ ಆಸ್ಪತ್ರೆಯಲ್ಲಿ ಮೃತಪಟ್ಟಿಲ್ಲ. ಬಿಸಿಗಾಳಿ ಸಂಬಂಧಿತ ಸಮಸ್ಯೆಗೆ ಒಳಗಾಗಿರುವ ರಾಜ್ಯದ ವಿವಿಧ ಜಿಲ್ಲೆಗಳ 1,326 ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ಪೈಕಿ 63 ಮಂದಿ ಶಾಖಾಘಾತಕ್ಕೆ ಒಳಗಾಗಿರುವುದು ದೃಢಪಟ್ಟಿದೆ’ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ನ ನಿರ್ದೇಶಕ ಡಾ. ಅಲೋಕ್ ತ್ರಿವೇದಿ ಹೇಳಿದ್ದಾರೆ.</p><p>ಜಾರ್ಖಂಡ್ನ 24 ಜಿಲ್ಲೆಗಳಲ್ಲಿ ಬಹುತೇಕ ಕಡೆ 40 ಡಿಗ್ರಿ ಸೆಲ್ಸಿಯಸ್ಗೂ ಅಧಿಕ ತಾಪಮಾನ ದಾಖಲಾಗಿದೆ. ದಾಲ್ಟೋಂಗಂಜ್ ಮತ್ತು ಗರ್ಹಾಗಳಲ್ಲಿ 47 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.</p><p>ಶಾಖಾಘಾತವು ಪ್ರಾಣಿಗಳ ಮೇಲೂ ಪರಿಣಾಮ ಬೀರಿದ್ದು, ಹಜಾರಿಬಾಗ್, ರಾಂಚಿ, ಗರ್ಹಾ, ಪಲಮುಗಳಲ್ಲಿ ಬಾವುಲಿಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಉತ್ತರ ಭಾರತ ಮತ್ತು ಈಶಾನ್ಯ ಭಾರತದ ಹಲವೆಡೆ ಬಿಸಿಲಿನ ಶಾಖ ಏರುತ್ತಿದ್ದು, ಜಾರ್ಖಂಡ್ನಲ್ಲಿ ಶಾಖಾಘಾತಕ್ಕೆ 4 ಮಂದಿ ಸಾವಿಗೀಡಾಗಿದ್ದಾರೆ. 1,326 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶಾಖಾಘಾತಕ್ಕೆ ಒಳಗಾದ ರೋಗಿಗಳಿಗಾಗಿ ಎಲ್ಲ ಜಿಲ್ಲಾಸ್ಪತ್ರೆಗಳು ಮತ್ತು ಇತರೆ ಆಸ್ಪತ್ರೆಗಳಲ್ಲಿ ಹವಾ ನಿಯಂತ್ರಿತ ಕೊಠಡಿಗಳು ಮತ್ತು ಖಾಲಿ ಬೆಡ್ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.</p><p>ಪಲಮುವಿನಲ್ಲಿ ಮೂವರು ಮತ್ತು ಜೆಮ್ಶೆಡ್ಪುರದಲ್ಲಿ ಒಬ್ಬರು ಶಾಖಾಘಾತಕ್ಕೆ ಬಲಿಯಾಗಿದ್ದಾರೆ. ಇವರಲ್ಲಿ ಯಾರೂ ಸಹ ಆಸ್ಪತ್ರೆಯಲ್ಲಿ ಮೃತಪಟ್ಟಿಲ್ಲ. ಬಿಸಿಗಾಳಿ ಸಂಬಂಧಿತ ಸಮಸ್ಯೆಗೆ ಒಳಗಾಗಿರುವ ರಾಜ್ಯದ ವಿವಿಧ ಜಿಲ್ಲೆಗಳ 1,326 ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ಪೈಕಿ 63 ಮಂದಿ ಶಾಖಾಘಾತಕ್ಕೆ ಒಳಗಾಗಿರುವುದು ದೃಢಪಟ್ಟಿದೆ’ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ನ ನಿರ್ದೇಶಕ ಡಾ. ಅಲೋಕ್ ತ್ರಿವೇದಿ ಹೇಳಿದ್ದಾರೆ.</p><p>ಜಾರ್ಖಂಡ್ನ 24 ಜಿಲ್ಲೆಗಳಲ್ಲಿ ಬಹುತೇಕ ಕಡೆ 40 ಡಿಗ್ರಿ ಸೆಲ್ಸಿಯಸ್ಗೂ ಅಧಿಕ ತಾಪಮಾನ ದಾಖಲಾಗಿದೆ. ದಾಲ್ಟೋಂಗಂಜ್ ಮತ್ತು ಗರ್ಹಾಗಳಲ್ಲಿ 47 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.</p><p>ಶಾಖಾಘಾತವು ಪ್ರಾಣಿಗಳ ಮೇಲೂ ಪರಿಣಾಮ ಬೀರಿದ್ದು, ಹಜಾರಿಬಾಗ್, ರಾಂಚಿ, ಗರ್ಹಾ, ಪಲಮುಗಳಲ್ಲಿ ಬಾವುಲಿಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>