<p><strong>ಜಾರ್ಖಂಡ್</strong>: ಬಿಜೆಪಿಯ ಪಿತೂರಿಯ ಭಾಗವಾಗಿ ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಡೆಸಲಾಗುತ್ತಿದೆ ಎಂದು ಶಾಸಕಿ, ಮುಖ್ಯಮಂತ್ರಿ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೇನ್ ಆರೋಪಿಸಿದರು.</p><p>ಗಿರಿಧಿಹದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂಸ್ಥೆಗಳ ಮೇಲೆ ಬಿಜೆಪಿಯು ತನ್ನ ಪ್ರಭಾವವನ್ನು ಬಲಪಡಿಸುತ್ತಿದೆ ಎಂದು ದೂರಿದರು.</p><p>‘ಮಹಾರಾಷ್ಟ್ರದಲ್ಲಿ ನಿಗದಿತ ಸಮಯಕ್ಕೆ ಚುನಾವಣೆ ಘೋಷಣೆಯಾದರೆ, ಜಾರ್ಖಂಡ್ನಲ್ಲಿ ಅವಧಿಗೂ ಮುನ್ನವೇ ಘೋಷಣೆಯಾಗಿದೆ. ಸಾಮಾನ್ಯವಾಗಿ ಐದು ಹಂತಗಳಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಈ ಬಾರಿ ಎರಡು ಹಂತದಲ್ಲಿ ನಡೆಸಲಾಗುತ್ತಿದೆ’ ಎಂದು ಹೇಳಿದರು.</p><p>‘ಗ್ರಾಮೀಣ ಪ್ರದೇಶದಲ್ಲಿ ಮತದಾನದ ವೇಳೆಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ. ಗ್ರಾಮೀಣ ಭಾಗದ ಅನೇಕ ಮತದಾರರು ಮತಗಟ್ಟೆಗಳನ್ನು ತಲುಪಲು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇದು ಹೇಮಂತ್ ಸೊರೇನ್ ಪರ ಗಟ್ಟಿಯಾಗಿ ನಿಂತಿರುವ ಬಡವರು, ರೈತರು , ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ’ ಎಂದರು.</p><p>ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾರ್ಖಂಡ್</strong>: ಬಿಜೆಪಿಯ ಪಿತೂರಿಯ ಭಾಗವಾಗಿ ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಡೆಸಲಾಗುತ್ತಿದೆ ಎಂದು ಶಾಸಕಿ, ಮುಖ್ಯಮಂತ್ರಿ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೇನ್ ಆರೋಪಿಸಿದರು.</p><p>ಗಿರಿಧಿಹದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂಸ್ಥೆಗಳ ಮೇಲೆ ಬಿಜೆಪಿಯು ತನ್ನ ಪ್ರಭಾವವನ್ನು ಬಲಪಡಿಸುತ್ತಿದೆ ಎಂದು ದೂರಿದರು.</p><p>‘ಮಹಾರಾಷ್ಟ್ರದಲ್ಲಿ ನಿಗದಿತ ಸಮಯಕ್ಕೆ ಚುನಾವಣೆ ಘೋಷಣೆಯಾದರೆ, ಜಾರ್ಖಂಡ್ನಲ್ಲಿ ಅವಧಿಗೂ ಮುನ್ನವೇ ಘೋಷಣೆಯಾಗಿದೆ. ಸಾಮಾನ್ಯವಾಗಿ ಐದು ಹಂತಗಳಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಈ ಬಾರಿ ಎರಡು ಹಂತದಲ್ಲಿ ನಡೆಸಲಾಗುತ್ತಿದೆ’ ಎಂದು ಹೇಳಿದರು.</p><p>‘ಗ್ರಾಮೀಣ ಪ್ರದೇಶದಲ್ಲಿ ಮತದಾನದ ವೇಳೆಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ. ಗ್ರಾಮೀಣ ಭಾಗದ ಅನೇಕ ಮತದಾರರು ಮತಗಟ್ಟೆಗಳನ್ನು ತಲುಪಲು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇದು ಹೇಮಂತ್ ಸೊರೇನ್ ಪರ ಗಟ್ಟಿಯಾಗಿ ನಿಂತಿರುವ ಬಡವರು, ರೈತರು , ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ’ ಎಂದರು.</p><p>ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>