ರಾಜ್ಯ, ದೇಶ, ವಿದೇಶಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ಹುಲಿ ಉಗುರು ಒಳಗೊಂಡ ಲಾಕೆಟ್ ಧರಿಸಿದ್ದ ಆರೋಪದಡಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ವರ್ತೂರು ಸಂತೋಷ್ (34) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2ನೇ ಹೆಚ್ಚುವರಿ ಎಸಿಜೆಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡುವರೆ ವರ್ಷಗಳಾದ ಬಳಿಕ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೇಳಿದರು.
ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ‘ನ್ಯೂಸ್ಕ್ಲಿಕ್’ ಸುದ್ದಿಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ದೆಹಲಿಯ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಬಿಹಾರದಲ್ಲಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಬೋಧನೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದಲ್ಲಿ 22 ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆಯೇ ಗೈರುಹಾಜರಾಗಿದ್ದ 2,081 ಶಿಕ್ಷಕರ ವೇತನವನ್ನು ಕಡಿತಗೊಳಿಸಲಾಗಿದೆ.
‘ತಮ್ಮ ಧರ್ಮದಲ್ಲಿ ಅವಕಾಶ ಇದ್ದರೂ ರಾಜ್ಯದ ಸರ್ಕಾರಿ ನೌಕರರು ಎರಡನೇ ಮದುವೆಯಾಗುವ ಪೂರ್ವದಲ್ಲಿ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಶರ್ಮಾ ಶುಕ್ರವಾರ ಹೇಳಿದ್ದಾರೆ.
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಗಾಜಾಪಟ್ಟಿಯಲ್ಲಿ ನಡೆಸಿದ ದಾಳಿ ವೇಳೆ ಹಮಾಸ್ನ ಐವರು ಹಿರಿಯ ಕಮಾಂಡರ್ಗಳು ಸಾವಿಗೀಡಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ.
ನೀಟ್ ವಿರೋಧಿ ಮಸೂದೆಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಒತ್ತಾಯಿಸಿದ್ದಾರೆ.
ತಮಿಳುನಾಡಿನ ರಾಜಭವನದ ಮುಖ್ಯ ದ್ವಾರದ ಮುಂಭಾಗ ಪೆಟ್ರೋಲ್ ಬಾಂಬ್ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಯನ್ನು ಪೊಲೀಸ್ ಮಹಾನಿರ್ದೇಶಕ ಶಂಕರ್ ಜೀವಲ್ ಮತ್ತು ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತ ಸಂದೀಪ್ ರಾಯ್ ರಾಥೋಡ್ ಅವರು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಿದ್ದಾರೆ.
ಚೀನಾದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಲಿ ಕೇಜಿಯಾಂಗ್ ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷವಾಗಿತ್ತು. ಚೀನಾದ ಕಮ್ಯುನಿಸ್ಟ್ ಪಾರ್ಟಿ (ಸಿಪಿಐ) ಉನ್ನತ ಸ್ಥಾನಕ್ಕೆ ಹಿಂದೊಮ್ಮೆ ಷಿ ಜಿನ್ಪಿಂಗ್ರಿಗೆ ತೀವ್ರ ಸ್ಪರ್ಧೆಯೊಡ್ಡಿದ್ದರು.