<p><strong>ನವದೆಹಲಿ:</strong> ‘ಕಜಾನ ಖಂಡಿತವಾಗಿಯೂ ಕೈಬೀಸಿ ಕರೆಯುತ್ತಿದೆ. ಆದರೆ, ದುಃಖಕರವೆಂದರೆ ಮಣಿಪುರ ಇನ್ನೂ ಕಾಯುತ್ತಲೇ ಇದೆ’ ಎಂದು ಕಾಂಗ್ರೆಸ್, ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೋಮವಾರ ವ್ಯಂಗ್ಯವಾಡಿದೆ.</p>.<p>ರಷ್ಯಾದ ಕಜಾನ ನಗರದಲ್ಲಿ ಈ ವಾರ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಆಹ್ವಾನ ನೀಡಿರುವುದರಿಂದ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಭೇಟಿಗೆ ಮಂಗಳವಾರ ಕಜಾನ್ಗೆ ಪ್ರಯಾಣಿಸಲಿದ್ದಾರೆ.</p>.<p>ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರನ್ನು ಕಾಂಗ್ರೆಸ್ ಪದೇ ಪದೇ ಒತ್ತಾಯಿಸಿದೆ. ಮಣಿಪುರದಲ್ಲಿ ಶಾಂತಿ ಮತ್ತು ಸಹಜ ಪರಿಸ್ಥಿತಿ ಪುನಃಸ್ಥಾಪಿಸಲು ಪ್ರಧಾನಿಯ ಭೇಟಿ ನೆರವಾಗಲಿದೆ ಎಂದು ಕಾಂಗ್ರೆಸ್ ಒತ್ತಿಹೇಳಿದೆ.</p>.<p>ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ ಉಸ್ತುವಾರಿ) ಜೈರಾಮ್ ರಮೇಶ್, ಬಿಕ್ಸ್ ಶೃಂಗಸಭೆ ರಷ್ಯಾದ ಕಜಾನ ನಗರದಲ್ಲಿ ಮಂಗಳವಾರ ಆರಂಭವಾಗಲಿದೆ. ಈ ಬ್ರಿಕ್ಸ್ ಶೃಂಗಸಭೆಯ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲು ಮೋದಿ ಹೊರಟಿದ್ದಾರೆ. ಆದರೆ, ಬ್ರಿಕ್ಸ್ ಶೃಂಗಸಭೆ 2014ರ ಹಿಂದೆಯೂ ನಡೆದಿರುವ ಘನ ಇತಿಹಾಸವಿದೆ’ ಎಂದು ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕಜಾನ ಖಂಡಿತವಾಗಿಯೂ ಕೈಬೀಸಿ ಕರೆಯುತ್ತಿದೆ. ಆದರೆ, ದುಃಖಕರವೆಂದರೆ ಮಣಿಪುರ ಇನ್ನೂ ಕಾಯುತ್ತಲೇ ಇದೆ’ ಎಂದು ಕಾಂಗ್ರೆಸ್, ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೋಮವಾರ ವ್ಯಂಗ್ಯವಾಡಿದೆ.</p>.<p>ರಷ್ಯಾದ ಕಜಾನ ನಗರದಲ್ಲಿ ಈ ವಾರ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಆಹ್ವಾನ ನೀಡಿರುವುದರಿಂದ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಭೇಟಿಗೆ ಮಂಗಳವಾರ ಕಜಾನ್ಗೆ ಪ್ರಯಾಣಿಸಲಿದ್ದಾರೆ.</p>.<p>ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರನ್ನು ಕಾಂಗ್ರೆಸ್ ಪದೇ ಪದೇ ಒತ್ತಾಯಿಸಿದೆ. ಮಣಿಪುರದಲ್ಲಿ ಶಾಂತಿ ಮತ್ತು ಸಹಜ ಪರಿಸ್ಥಿತಿ ಪುನಃಸ್ಥಾಪಿಸಲು ಪ್ರಧಾನಿಯ ಭೇಟಿ ನೆರವಾಗಲಿದೆ ಎಂದು ಕಾಂಗ್ರೆಸ್ ಒತ್ತಿಹೇಳಿದೆ.</p>.<p>ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ ಉಸ್ತುವಾರಿ) ಜೈರಾಮ್ ರಮೇಶ್, ಬಿಕ್ಸ್ ಶೃಂಗಸಭೆ ರಷ್ಯಾದ ಕಜಾನ ನಗರದಲ್ಲಿ ಮಂಗಳವಾರ ಆರಂಭವಾಗಲಿದೆ. ಈ ಬ್ರಿಕ್ಸ್ ಶೃಂಗಸಭೆಯ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲು ಮೋದಿ ಹೊರಟಿದ್ದಾರೆ. ಆದರೆ, ಬ್ರಿಕ್ಸ್ ಶೃಂಗಸಭೆ 2014ರ ಹಿಂದೆಯೂ ನಡೆದಿರುವ ಘನ ಇತಿಹಾಸವಿದೆ’ ಎಂದು ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>