<p><strong>ತ್ರಿಶೂರ್(ಕೇರಳ):</strong> ತ್ರಿಶೂರ್ನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲಿನ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ 120 ಕೆ.ಜಿಯಷ್ಟು ಅಕ್ರಮ ಚಿನ್ನವನ್ನು ಕೇರಳದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p><p>ರಾಜ್ಯದಲ್ಲಿ ಈವರೆಗೆ ವಶಪಡಿಸಿಕೊಂಡಿರುವ ಅತ್ಯಧಿಕ ಪ್ರಮಾಣದ ಚಿನ್ನ ಇದಾಗಿದೆ. ಈ ದಾಳಿಯಲ್ಲಿ 700 ಅಧಿಕಾರಿಗಳು ತೊಡಗಿಸಿಕೊಂಡಿದ್ದು, 78 ಕಡೆಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಬುಧವಾರ ಆರಂಭವಾದ ಕಾರ್ಯಾಚರಣೆ ಮುಂದುವರಿದಿದೆ.</p><p>ಆಭರಣಗಳ ತಯಾರಿಕಾ ಘಟಕಗಳು ಮತ್ತು ಆಭರಣದ ಅಂಗಡಿಗಳ ಮೇಲೂ ದಾಳಿ ನಡೆದಿದೆ.</p><p>ಬಿಲ್ ಮತ್ತು ತೆರಿಗೆ ಪ್ರಕ್ರಿಯೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಿಎಸ್ಟಿ ವಿಶೇಷ ಕಮಿಷನರ್ ಅಬ್ರಹಾಂ ಅವರ ಮೇಲ್ವಿಚಾರಣೆಯಲ್ಲಿ ದಾಳಿ ನಡೆಸಲಾಗುತ್ತಿದೆ. ಗೌಪ್ಯತೆಯ ದೃಷ್ಟಿಯಿಂದ ತರಬೇತಿ ಕಾರ್ಯಕ್ರಮದ ನೆಪದಲ್ಲಿ ರಾಜ್ಯದಾದ್ಯಂತದ ಅಧಿಕಾರಿಗಳನ್ನು ತ್ರಿಶೂರ್ಗೆ ಕರೆಸಿಕೊಂಡು ಬ್ಯಾನರ್ಗಳನ್ನು ಹಾಕಿದ ಬಸ್ಗಳಲ್ಲಿ ವಿವಿಧ ಸ್ಥಳಗಳಿಗೆ ಕಳುಹಿಸಿ ಶೋಧ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. </p><p>ಕಾರ್ಯಾಚರಣೆ ಮುಂದುವರಿಯಲಿದೆ ಎಂದು ರಾಜ್ಯ ಜಿಎಸ್ಟಿ ಗುಪ್ತಚರ ಸಂಸ್ಥೆಯ ಉಪ ಆಯುಕ್ತ ದಿನೇಶ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್(ಕೇರಳ):</strong> ತ್ರಿಶೂರ್ನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲಿನ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ 120 ಕೆ.ಜಿಯಷ್ಟು ಅಕ್ರಮ ಚಿನ್ನವನ್ನು ಕೇರಳದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p><p>ರಾಜ್ಯದಲ್ಲಿ ಈವರೆಗೆ ವಶಪಡಿಸಿಕೊಂಡಿರುವ ಅತ್ಯಧಿಕ ಪ್ರಮಾಣದ ಚಿನ್ನ ಇದಾಗಿದೆ. ಈ ದಾಳಿಯಲ್ಲಿ 700 ಅಧಿಕಾರಿಗಳು ತೊಡಗಿಸಿಕೊಂಡಿದ್ದು, 78 ಕಡೆಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಬುಧವಾರ ಆರಂಭವಾದ ಕಾರ್ಯಾಚರಣೆ ಮುಂದುವರಿದಿದೆ.</p><p>ಆಭರಣಗಳ ತಯಾರಿಕಾ ಘಟಕಗಳು ಮತ್ತು ಆಭರಣದ ಅಂಗಡಿಗಳ ಮೇಲೂ ದಾಳಿ ನಡೆದಿದೆ.</p><p>ಬಿಲ್ ಮತ್ತು ತೆರಿಗೆ ಪ್ರಕ್ರಿಯೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಜಿಎಸ್ಟಿ ವಿಶೇಷ ಕಮಿಷನರ್ ಅಬ್ರಹಾಂ ಅವರ ಮೇಲ್ವಿಚಾರಣೆಯಲ್ಲಿ ದಾಳಿ ನಡೆಸಲಾಗುತ್ತಿದೆ. ಗೌಪ್ಯತೆಯ ದೃಷ್ಟಿಯಿಂದ ತರಬೇತಿ ಕಾರ್ಯಕ್ರಮದ ನೆಪದಲ್ಲಿ ರಾಜ್ಯದಾದ್ಯಂತದ ಅಧಿಕಾರಿಗಳನ್ನು ತ್ರಿಶೂರ್ಗೆ ಕರೆಸಿಕೊಂಡು ಬ್ಯಾನರ್ಗಳನ್ನು ಹಾಕಿದ ಬಸ್ಗಳಲ್ಲಿ ವಿವಿಧ ಸ್ಥಳಗಳಿಗೆ ಕಳುಹಿಸಿ ಶೋಧ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. </p><p>ಕಾರ್ಯಾಚರಣೆ ಮುಂದುವರಿಯಲಿದೆ ಎಂದು ರಾಜ್ಯ ಜಿಎಸ್ಟಿ ಗುಪ್ತಚರ ಸಂಸ್ಥೆಯ ಉಪ ಆಯುಕ್ತ ದಿನೇಶ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>