ಮಹಿಳಾ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಜೆಬಿ ಮಾಥರ್ ಅವರು, ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದರು.
ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ವಿಧಾನಸೌಧಕ್ಕೆ ಇರುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ಭೇದಿಸಿ ಮುನ್ನುಗ್ಗಲು ಯತ್ನಿಸಿದರು. ಕೆಲ ಪ್ರತಿಭಟನಾಕರರು ಪಾತ್ರೆಗಳನ್ನು ಎಸೆಯಲು ಪ್ರಯತ್ನಿಸಿದ್ದರಿಂದ, ಪೊಲೀಸರು ಗುಂಪನ್ನು ಚದುರಿಸಲು ಜಲ ಫಿರಂಗಿ ಪ್ರಯೋಗಿಸಿದರು.