ಗುರುವಾರ, 24 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ ಆಸ್ಪತ್ರೆ ಮೇಲೆ ದಾಳಿ: 9 ಜನರ ಬಂಧನ

Published : 15 ಆಗಸ್ಟ್ 2024, 14:23 IST
Last Updated : 15 ಆಗಸ್ಟ್ 2024, 14:23 IST
ಫಾಲೋ ಮಾಡಿ
Comments
ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೇಲೆ ಬುಧವಾರ ಮಧ್ಯರಾತ್ರಿಯ ಬಳಿಕ ದಾಳಿ ನಡೆಸಿದ ದುಷ್ಕರ್ಮಿಗಳು ವಿವಿಧ ವಾರ್ಡ್‌ಗಳನ್ನು ಧ್ವಂಸಗೊಳಿಸಿರುವುದು

ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೇಲೆ ಬುಧವಾರ ಮಧ್ಯರಾತ್ರಿಯ ಬಳಿಕ ದಾಳಿ ನಡೆಸಿದ ದುಷ್ಕರ್ಮಿಗಳು ವಿವಿಧ ವಾರ್ಡ್‌ಗಳನ್ನು ಧ್ವಂಸಗೊಳಿಸಿರುವುದು

–ಪಿಟಿಐ ಚಿತ್ರ

ದುಷ್ಕರ್ಮಿಗಳ ದಾಳಿಯಲ್ಲಿ ಧ್ವಂಸಗೊಳಿಸಿರುವ ತುರ್ತು ವಿಭಾಗದ ವಾರ್ಡ್‌ ಅನ್ನು ನೋವಿನಿಂದ ಗಮನಿಸಿದ ನರ್ಸ್‌  –ಎಎಫ್‌ಪಿ ಚಿತ್ರ
ದುಷ್ಕರ್ಮಿಗಳ ದಾಳಿಯಲ್ಲಿ ಧ್ವಂಸಗೊಳಿಸಿರುವ ತುರ್ತು ವಿಭಾಗದ ವಾರ್ಡ್‌ ಅನ್ನು ನೋವಿನಿಂದ ಗಮನಿಸಿದ ನರ್ಸ್‌  –ಎಎಫ್‌ಪಿ ಚಿತ್ರ
9 ಜನರ ಬಂಧನ:
ಈ ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ. ಅಲ್ಲದೆ ಆಸ್ಪತ್ರೆಯ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ‘ರಿಕ್ಲೈಮ್‌ ದಿ ನೈಟ್‌’ ಹೆಸರಿನ ಅಭಿಯಾನವು ಸಾಮಾಜಿಕ ಮಾಧ್ಯಮದ ಮೂಲಕ ವ್ಯಾಪಕವಾಗಿ ಪ್ರಚಾರವಾಗಿದ್ದರಿಂದ ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾತ್ರಿ 11.55ಕ್ಕೆ ಆರಂಭವಾದ ಈ ಅಭಿಯಾನ ಕೋಲ್ಕತ್ತದ ಪ್ರಮುಖ ಪ್ರದೇಶಗಳಲ್ಲಿ ಮತ್ತು ಇತರ ಪಟ್ಟಣಗಳಲ್ಲಿಯೂ ನಡೆಯಿತು. ಸ್ವಾತಂತ್ರ್ಯ ದಿನಾಚರಣೆ ಜತೆ ಈ ಅಭಿಯಾನವನ್ನು ಸಂಯೋಜಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.  ಪೊಲೀಸ್‌ ಆಯುಕ್ತ ವಿನೀತ್ ಗೋಯಲ್‌ ಅವರು ಗುರುವಾರ ನಸುಕಿನ 2 ಗಂಟೆಗೆ ಆಸ್ಪತ್ರೆಯ ಆವರಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು ‘ಈ ಪ್ರಕರಣ ಭೇದಿಸಲು ಪೊಲೀಸರು ಸಾಕಷ್ಟು ಶ್ರಮಿಸಿದ್ದಾರೆ. ಆದರೆ ಕೆಲ ಮಾಧ್ಯಮಗಳಲ್ಲಿ ದುರುದ್ದೇಶಪೂರಿತ ಪ್ರಚಾರ ನಡೆಯುತ್ತಿದೆ. ಅದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ದುಷ್ಕರ್ಮಿಗಳ ದಾಳಿಯಲ್ಲಿ ನಾಶವಾಗಿರುವ ಔಷಧಿಗಳು –ಎಎಫ್‌ಪಿ ಚಿತ್ರ
ದುಷ್ಕರ್ಮಿಗಳ ದಾಳಿಯಲ್ಲಿ ನಾಶವಾಗಿರುವ ಔಷಧಿಗಳು –ಎಎಫ್‌ಪಿ ಚಿತ್ರ
ಪ್ರತಿಭಟನೆಯಲ್ಲಿ ನರ್ಸ್‌ಗಳು ಭಾಗಿ
ಆಸ್ಪತ್ರೆಯ ನರ್ಸಿಂಗ್‌ ಸ್ಟೇಷನ್‌ ಮೇಲೆ ದಾಳಿ ನಡೆದ ಕಾರಣ ನರ್ಸ್‌ಗಳು ಕಿರಿಯ ವೈದ್ಯರ ಜತೆ ಗುರುವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು. ವಾರದಿಂದ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯದಾದ್ಯಂತ ವೈದ್ಯಕೀಯ ಸೇವೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಕಳೆದ ವಾರ ಸ್ನಾತಕೋತ್ತರ ಪದವಿಯ ಟ್ರೈನಿ ವೈದ್ಯೆಯ (32) ಮೃತದೇಹ ಆಸ್ಪತ್ರೆಯ ಸೆಮಿನಾರ್‌ ಸಭಾಂಗಣದಲ್ಲಿ ಆಗಸ್ಟ್ 9ರ ಬೆಳಿಗ್ಗೆ ಪತ್ತೆಯಾಗಿತ್ತು. ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆಯಾಗಿದ್ದು ಕಲ್ಕತ್ತ ಹೈಕೋರ್ಟ್‌ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆಗಸ್ಟ್‌ 13ರಂದು ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT