‘ಆರೋಪಿಯು ತನ್ನ ಪಾಸ್ಪೋರ್ಟ್ ಅನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಒಪ್ಪಿಸಬೇಕು. ವಿಚಾರಣೆ ಪ್ರಕ್ರಿಯೆಗೆ ಹಾಜರಾಗುವ ಸಲುವಾಗಿ ಮಾತ್ರ ಉತ್ತರಪ್ರದೇಶಕ್ಕೆ ಭೇಟಿ ನೀಡಬಹುದು. ಆರೋಪಿ, ಆತನ ಪೋಷಕರು ಅಥವಾ ಬೆಂಬಲಿಗರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಮುಂದಾಗಿದ್ದೇ ಆದಲ್ಲಿ ಮಧ್ಯಂತರ ಜಾಮೀನು ರದ್ದುಪಡಿಸಲಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.