ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಧ್ವಜಾರೋಹಣ: ಅತಿಶಿ ಬದಲು ಗೃಹ ಸಚಿವ ಕೈಲಾಶ್ ಆಯ್ಕೆ ಮಾಡಿದ ಲೆ. ಗವರ್ನರ್

Published : 13 ಆಗಸ್ಟ್ 2024, 14:01 IST
Last Updated : 13 ಆಗಸ್ಟ್ 2024, 14:01 IST
ಫಾಲೋ ಮಾಡಿ
Comments

ನವದೆಹಲಿ: ದೆಹಲಿ ಸರ್ಕಾರ ಆಯೋಜಿಸುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವೆ ಅತಿಶಿ ಬದಲು, ಗೃಹ ಸಚಿವ ಕೈಲಾಶ್ ಗೆಹಲೋತ್ ಅವರ ಹೆಸರನ್ನು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೆನಾ ಅವರು ಅಂತಿಮಗೊಳಿಸಿದ್ದಾರೆ.

ಸರ್ಕಾರದಲ್ಲಿ ಹಲವು ಹಿರಿಯ ನಾಯಕರಿದ್ದರೂ, ಅವರನ್ನು ಕಡೆಗಣಿಸಿ ಸೆಕ್ಸೆನಾ ಅವರು ತಮ್ಮ ಆಯ್ಕೆ ಪ್ರಕಟಿಸಿದ್ದು, ಎಎಪಿ ಹಾಗೂ ಲೆಫ್ಟಿನೆಂಟ್ ಗವರ್ನರ್ ನಡುವೆ ಮತ್ತೊಂದು ಸುತ್ತಿನ ಜಟಾಪಟಿಗೆ ವೇದಿಕೆ ಸಿದ್ಧವಾದಂತಾಗಿದೆ.

‘ಸ್ವಾತಂತ್ರ್ಯ ದಿನದಂದು ದೆಹಲಿಯ ಛತ್ರಸಾಲ್‌ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲು ಲೆಫ್ಟಿನಂಟ್‌ ಗವರ್ನರ್‌ ಅವರು ಗೃಹ ಸಚಿವ ಕೈಲಾಶ್‌ ಗೆಹಲೋತ್‌ ಅವರ ಹೆಸರನ್ನು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಸಕ್ಸೆನಾ ಅವರ ಕಾರ್ಯದರ್ಶಿ ಆಶಿಶ್‌ ಕುಂದ್ರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT