<p><strong>ನವದೆಹಲಿ:</strong> ಲೋಕಸಭೆಯ ಮುಂಬರುವ ಚುನಾವಣೆಗೆ ಕಾಂಗ್ರೆಸ್ ವರಿಷ್ಠರು ಸಿದ್ಧತೆ ನಡೆಸಿದ್ದು, ’ಇಂಡಿಯಾ‘ ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ, ರಾಜ್ಯಗಳಲ್ಲಿನ ಪಕ್ಷದ ಸ್ಥಿತಿಗತಿ ಕುರಿತು ರಾಜ್ಯ ಘಟಕದ ಮುಖಂಡರೊಂದಿಗೆ ಚರ್ಚೆ ಆರಂಭಿಸಿದ್ದಾರೆ.</p>.<p>ಚುನಾವಣೆ ಎದುರಿಸಲು ರಾಜ್ಯದಲ್ಲಿನ ಪಕ್ಷದ ಸ್ಥಿತಿಗತಿ ಕುರಿತು ಬಿಹಾರದ ಕಾಂಗ್ರೆಸ್ ಮುಖಂಡರ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರು ಮಂಗಳವಾರ ಚರ್ಚೆ ನಡೆಸಿದರು. ಆಂಧ್ರಪ್ರದೇಶದ ಕಾಂಗ್ರೆಸ್ ಮುಖಂಡರ ಜೊತೆಗೆ ಬುಧವಾರ ಸಭೆ ನಡೆಸಲಿದ್ದಾರೆ.</p>.<p>ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಸೇರಿದಂತೆ 40 ಮಂದಿ ಮುಖಂಡರ ಜೊತೆ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಜೆಡಿಯು ಮತ್ತು ಆರ್ಜೆಡಿ ಜೊತೆಗೆ ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸುವಾಗ, ’ಕಾಂಗ್ರೆಸ್ಗೆ ಸೂಕ್ತ ಸಂಖ್ಯೆಯ’ ಸೀಟುಗಳನ್ನು ಕೇಳುವಂತೆ ಬಿಹಾರದ ಮುಖಂಡರು ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಸೀಟು ಹಂಚಿಕೆ ವಿಚಾರವಾಗಿ ಮಾತನಾಡುವ ಮೊದಲು ರಾಜ್ಯದಲ್ಲಿ ಪಕ್ಷದ ನೆಲೆಗಟ್ಟು ಹೇಗಿದೆ ಎಂಬುದರ ಬಗ್ಗೆ ಹೇಳಿ ಎಂದು ರಾಹುಲ್ ಗಾಂಧಿ ಆವರು ಬಿಹಾರದ ಕಾಂಗ್ರೆಸ್ ಮುಖಂಡರಿಗೆ ಸೂಚಿಸಿದರು ಎನ್ನಲಾಗಿದೆ.</p>.<p>ಬಿಹಾರದಲ್ಲಿ ಕಾಂಗ್ರೆಸ್ ಸದ್ಯ ಒಂದು ಲೋಕಸಭಾ ಸ್ಥಾನವನ್ನು ಹೊಂದಿದೆ. ಜೆಡಿಯು–ಆರ್ಜೆಡಿಯು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮೂರರಿಂದ ನಾಲ್ಕು ಸೀಟುಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಮೂರು ಗಂಟೆಗಳ ಸಭೆಯ ಬಳಿಕ ಮಾತನಾಡಿದ ಅಖಿಲೇಶ್ ಪ್ರಸಾದ್ ಸಿಂಗ್, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಅಡಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.</p>.<p>‘ಬಿಹಾರದಲ್ಲಿ ಮೈತ್ರಿ ಸರ್ಕಾರವು ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆಯ ಮುಂಬರುವ ಚುನಾವಣೆಗೆ ಕಾಂಗ್ರೆಸ್ ವರಿಷ್ಠರು ಸಿದ್ಧತೆ ನಡೆಸಿದ್ದು, ’ಇಂಡಿಯಾ‘ ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ, ರಾಜ್ಯಗಳಲ್ಲಿನ ಪಕ್ಷದ ಸ್ಥಿತಿಗತಿ ಕುರಿತು ರಾಜ್ಯ ಘಟಕದ ಮುಖಂಡರೊಂದಿಗೆ ಚರ್ಚೆ ಆರಂಭಿಸಿದ್ದಾರೆ.</p>.<p>ಚುನಾವಣೆ ಎದುರಿಸಲು ರಾಜ್ಯದಲ್ಲಿನ ಪಕ್ಷದ ಸ್ಥಿತಿಗತಿ ಕುರಿತು ಬಿಹಾರದ ಕಾಂಗ್ರೆಸ್ ಮುಖಂಡರ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರು ಮಂಗಳವಾರ ಚರ್ಚೆ ನಡೆಸಿದರು. ಆಂಧ್ರಪ್ರದೇಶದ ಕಾಂಗ್ರೆಸ್ ಮುಖಂಡರ ಜೊತೆಗೆ ಬುಧವಾರ ಸಭೆ ನಡೆಸಲಿದ್ದಾರೆ.</p>.<p>ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಸೇರಿದಂತೆ 40 ಮಂದಿ ಮುಖಂಡರ ಜೊತೆ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಜೆಡಿಯು ಮತ್ತು ಆರ್ಜೆಡಿ ಜೊತೆಗೆ ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸುವಾಗ, ’ಕಾಂಗ್ರೆಸ್ಗೆ ಸೂಕ್ತ ಸಂಖ್ಯೆಯ’ ಸೀಟುಗಳನ್ನು ಕೇಳುವಂತೆ ಬಿಹಾರದ ಮುಖಂಡರು ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಸೀಟು ಹಂಚಿಕೆ ವಿಚಾರವಾಗಿ ಮಾತನಾಡುವ ಮೊದಲು ರಾಜ್ಯದಲ್ಲಿ ಪಕ್ಷದ ನೆಲೆಗಟ್ಟು ಹೇಗಿದೆ ಎಂಬುದರ ಬಗ್ಗೆ ಹೇಳಿ ಎಂದು ರಾಹುಲ್ ಗಾಂಧಿ ಆವರು ಬಿಹಾರದ ಕಾಂಗ್ರೆಸ್ ಮುಖಂಡರಿಗೆ ಸೂಚಿಸಿದರು ಎನ್ನಲಾಗಿದೆ.</p>.<p>ಬಿಹಾರದಲ್ಲಿ ಕಾಂಗ್ರೆಸ್ ಸದ್ಯ ಒಂದು ಲೋಕಸಭಾ ಸ್ಥಾನವನ್ನು ಹೊಂದಿದೆ. ಜೆಡಿಯು–ಆರ್ಜೆಡಿಯು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮೂರರಿಂದ ನಾಲ್ಕು ಸೀಟುಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಮೂರು ಗಂಟೆಗಳ ಸಭೆಯ ಬಳಿಕ ಮಾತನಾಡಿದ ಅಖಿಲೇಶ್ ಪ್ರಸಾದ್ ಸಿಂಗ್, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಅಡಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.</p>.<p>‘ಬಿಹಾರದಲ್ಲಿ ಮೈತ್ರಿ ಸರ್ಕಾರವು ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>