ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Lok Sabha Elections: ಕೌತುಕ ಮೂಡಿಸಿದ ನಿತೀಶ್‌ ನಡೆ

Published : 27 ಜನವರಿ 2024, 0:23 IST
Last Updated : 27 ಜನವರಿ 2024, 0:23 IST
ಫಾಲೋ ಮಾಡಿ
Comments
ನಿತೀಶ್‌ಗೆ ಯಾಕೆ ಮುನಿಸು?
ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಆದರೆ ಅದಕ್ಕೀಗ ನಿತೀಶ್‌ ಅವರಿಗೆ ಮನಸ್ಸಿದ್ದಂತಿಲ್ಲ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.  ಇದನ್ನು ಅಲ್ಲಗಳೆದಿರುವ ಜೆಡಿಯು ಮೂಲಗಳು ‘ಇಂಡಿಯಾ’ ಮೈತ್ರಿಕೂಟದ ಜೊತೆಗಿನ ಸಂವಹನ ಸ್ಥಗಿತವಾಗಿದೆ ಎಂದಿವೆ. ಆರ್‌ಜೆಡಿ ಮತ್ತು ಕಾಂಗ್ರೆಸ್‌ ಒಗ್ಗೂಡಿ ನಿತೀಶ್‌ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಮುಂದಾದರೆ ತನ್ನ ಹಿತಾಸಕ್ತಿ ಕಾಪಾಡಿಕಕೊಳ್ಳುವುದು ಹೇಗೆ ಎಂಬುದು ಜೆಡಿಯುಗೆ ತಿಳಿದಿದೆ. ಹಿಂದೆಯೂ ಬಿಜೆಪಿ ತನ್ನ ರಾಜಕೀಯ ಭವಿಷ್ಯಕ್ಕೆ ಬೆದರಿಕೆಯೊಡ್ಡಿದಾಗ ಅದು ಎನ್‌ಡಿಎ ತೊರೆದು ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದನ್ನು ಮರೆಯಬಾರದು ಎಂದು ಮೂಲಗಳು ಹೇಳುತ್ತವೆ.
ಊಹಾಪೋಹಕ್ಕೆ ಕಾರಣ ಏನು?:
ಪಟ್ನಾದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಅವರು ದೂರದಲ್ಲಿ ಕುಳಿತಿದ್ದರು. ಇದು ಸರ್ಕಾರದ ಮೈತ್ರಿ ಪಕ್ಷಗಳ ನಡುವೆ ಬಿಕ್ಕಟ್ಟು ಮೂಡಿರಬಹುದು ಎಂಬುದನ್ನು ಬಿಂಬಿಸಿತು. ನಂತರ ರಾಜ್ಯಪಾಲರು ಆಯೋಜಿಸಿದ್ದ ಚಹಾ ಕೂಟದಲ್ಲಿ ನಿತೀಶ್‌ ಅವರು ಪಾಲ್ಗೊಂಡಿದ್ದರೆ ಉಪ ಮುಖ್ಯಮಂತ್ರಿ ಗೈರಾಗಿದ್ದರು. ಈ ಎರಡೂ ಬೆಳವಣಿಗೆಗಳು ಬಿಹಾರದ ರಾಜಕೀಯದಲ್ಲಿ ಊಹಾಪೋಹ ತೀವ್ರಗೊಳ್ಳುವಂತೆ ಮಾಡಿದವು. ‘ಎನ್‌ಡಿಎ ಬಾಗಿಲು ಮುಚ್ಚಿಲ್ಲ’: ಇದರ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ‘ರಾಜಕೀಯದಲ್ಲಿ ಎಂದಿಗೂ ಶಾಶ್ವತವಾಗಿ ಬಾಗಿಲು ಮುಚ್ಚುವುದಿಲ್ಲ. ಸಮಯ ಬಂದಾಗ ಬಾಗಿಲು ತೆರೆಯುತ್ತದೆ. ಇದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಈ ಮೂಲಕ ಅವರು ಎನ್‌ಡಿಎ ಮೈತ್ರಿ ಸೇರಲು ಜೆಡಿಯು ಬಂದರೆ ಸ್ವಾಗತಿಸುವ ಸಂದೇಶವನ್ನು ರವಾನಿಸಿದರು. ಇದಕ್ಕೆ ಪೂರಕವಾಗಿ ‘ಬಿಹಾರದಲ್ಲಿ ಮಹಾಘಟಬಂಧನ್‌ ಸರ್ಕಾರವು ಹಾಗೆಯೇ ಉಳಿಯುವುದಿಲ್ಲ. ನಿತೀಶ್‌ ಕುಮಾರ್‌ ಅವರು ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಆರ್‌ಜೆಡಿಯನ್ನು ಗುರಿಯಾಗಿಸಿಕೊಂಡೇ ವಂಶ ರಾಜಕಾರಣದ ಕುರಿತು ಹೇಳಿಕೆ ನೀಡಿದ್ದಾರೆ’ ಎಂದು ಹಿಂದೂಸ್ತಾನ್ ಅವಾಮ್‌ ಮೋರ್ಚಾದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಜಿತನ್‌ ರಾಮ್‌ ಮಾಂಝಿ ಹೇಳಿಕೆ ನೀಡಿದರು. ‘ಬಿಹಾರದ ರಾಜಕೀಯ ವಾತಾವರಣದ ಬಗ್ಗೆ ಹೆಚ್ಚಿಗೆ ಹೇಳಲು ಏನೂ ಇಲ್ಲ. ವಂಶಾಡಳಿತದ ರಾಜಕೀಯಕ್ಕೆ ಸಂಬಂಧಿಸಿದಂತೆ ನಿತೀಶ್‌ ಅವರು ಹೇಳಿಕೆ ನೀಡಿದ ಬಳಿಕವೂ ಅವರೆಲ್ಲ ಒಗ್ಗಟ್ಟಾಗಿ ಉಳಿಯುತ್ತಾರೆ ಎಂದು ನೀವು ಭಾವಿಸುತ್ತೀರಾ’ ಎಂದು ಅವರು ಸುದ್ದಿಗಾರರನ್ನೇ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT