<p><strong>ನವದೆಹಲಿ</strong>: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರೂಪಿಸುವ ಕುರಿತು ಚರ್ಚಿಸಲು ಮಾರ್ಚ್ 19ರಂದು ಸಭೆ ಸೇರಲಿದ್ದು, ಪ್ರಣಾಳಿಕೆಗೆ ಅಂತಿಮ ರೂಪ ನೀಡಲಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಮಾರ್ಚ್ 19 ಮತ್ತು 20ರಂದು ಸಭೆ ಸೇರುವ ಸಾಧ್ಯತೆ ಇದ್ದು, ಲೋಕಸಭಾ ಚುನಾವಣೆಗೆ ಉಳಿದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.</p>.<p>‘ಭಾಗೀದಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ ನ್ಯಾಯ’ ಮತ್ತು ‘ಯುವ ನ್ಯಾಯ’– ಈ ಐದು ‘ನ್ಯಾಯ’ಗಳು ಮತ್ತು ಒಂದು ‘ನ್ಯಾಯ’ಕ್ಕೆ ಐದು ಗ್ಯಾರಂಟಿಗಳಂತೆ ಒಟ್ಟು 25 ಗ್ಯಾರಂಟಿಗಳನ್ನು ಈಗಾಗಲೇ ಪಕ್ಷವು ಘೋಷಣೆ ಮಾಡಿದ್ದು, ಅವುಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸುತ್ತೇವೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p>‘ಇವು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಗ್ಯಾರಂಟಿಗಳಲ್ಲ’ ಎಂದು ಅವರು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮೋದಿ ಕಿ ಗ್ಯಾರಂಟಿ’ ಕುರಿತು ವ್ಯಂಗ್ಯ ಮಾಡಿದರು.</p>.<p>ಕಾಂಗ್ರೆಸ್ ಇದುವರೆಗೆ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದು, ಒಟ್ಟು 82 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರೂಪಿಸುವ ಕುರಿತು ಚರ್ಚಿಸಲು ಮಾರ್ಚ್ 19ರಂದು ಸಭೆ ಸೇರಲಿದ್ದು, ಪ್ರಣಾಳಿಕೆಗೆ ಅಂತಿಮ ರೂಪ ನೀಡಲಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಮಾರ್ಚ್ 19 ಮತ್ತು 20ರಂದು ಸಭೆ ಸೇರುವ ಸಾಧ್ಯತೆ ಇದ್ದು, ಲೋಕಸಭಾ ಚುನಾವಣೆಗೆ ಉಳಿದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.</p>.<p>‘ಭಾಗೀದಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ ನ್ಯಾಯ’ ಮತ್ತು ‘ಯುವ ನ್ಯಾಯ’– ಈ ಐದು ‘ನ್ಯಾಯ’ಗಳು ಮತ್ತು ಒಂದು ‘ನ್ಯಾಯ’ಕ್ಕೆ ಐದು ಗ್ಯಾರಂಟಿಗಳಂತೆ ಒಟ್ಟು 25 ಗ್ಯಾರಂಟಿಗಳನ್ನು ಈಗಾಗಲೇ ಪಕ್ಷವು ಘೋಷಣೆ ಮಾಡಿದ್ದು, ಅವುಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸುತ್ತೇವೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p>‘ಇವು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಗ್ಯಾರಂಟಿಗಳಲ್ಲ’ ಎಂದು ಅವರು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮೋದಿ ಕಿ ಗ್ಯಾರಂಟಿ’ ಕುರಿತು ವ್ಯಂಗ್ಯ ಮಾಡಿದರು.</p>.<p>ಕಾಂಗ್ರೆಸ್ ಇದುವರೆಗೆ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದು, ಒಟ್ಟು 82 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>