<p><strong>ಭೋಪಾಲ್</strong>: 7 ತಿಂಗಳ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ಬಾಲಕ ಮೃತಪಟ್ಟಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬೀದಿ ನಾಯಿಗಳ ಹಾವಳಿ ತಡೆಯಲು ಜನರ ಬಳಿ ಸಲಹೆಗಳನ್ನು ಕೇಳಿದ್ದಾರೆ.</p><p>ಭೋಪಾಲ್ನ ಅಯೋಧ್ಯೆ ನಗರದಲ್ಲಿ ಬೀದಿ ನಾಯಿಗಳು 7 ತಿಂಗಳ ಬಾಲಕನ ಮೇಲೆ ದಾಳಿ ಮಾಡಿದ್ದರಿಂದ ಬಾಲಕ ಬುಧವಾರ ( ಜನವರಿ 10) ಮೃತಪಟ್ಟಿತ್ತು. ದಾಳಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.</p><p>ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಯಾದವ್ ‘ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಯಾವ ರೀತಿ ಜಾಗೃತಿ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಜನರಿಂದ ಸಲಹೆಗಳನ್ನು ಕೇಳಲಾಗಿದೆ’. ಮೃತ ಬಾಲಕನ ಕುಟುಂಬಕ್ಕೆ ₹4 ಲಕ್ಷ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಾದವ್ ಆದೇಶಿಸಿದ್ದಾರೆ.</p><p>ಬುಧವಾರವೇ ಬಾಲಕನ ಅಂತ್ಯಕ್ರಿಯೆಯನ್ನು ಕುಟುಂಬದವರು ನೆರವೇರಿಸಿದರು. ಆದರೆ ಶನಿವಾರ ಬಾಲಕನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಬಾಲಕನನ್ನು ನೆಲದ ಮೇಲೆ ಆಡಿಕೊಳ್ಳಲು ಬಿಟ್ಟು ತಾಯಿ ಬೇರೆ ಕೆಲಸದಲ್ಲಿ ತೊಡಗಿದ್ದಳು. ಈ ವೇಳೆ ಬೀದಿ ನಾಯಿಗಳು ದಾಳಿ ಮಾಡಿವೆ’ ಎಂದು ಅಯೋಧ್ಯೆ ನಗರದ ಇನ್ಸ್ಪೆಕ್ಟರ್ ಮಹೇಶ್ ತಿಳಿಸಿದ್ದಾರೆ.</p><p>ಘಟನೆಯ ಬಳಿಕ ಭೋಪಾಲ್ನ ಮುನ್ಸಿಪಲ್ ಕಾರ್ಪೊರೇಷನ್ ಅಯೋಧ್ಯೆ ನಗರದಿಂದ ಎಂಟು ಬೀದಿ ನಾಯಿಗಳನ್ನು ಹಿಡಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: 7 ತಿಂಗಳ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ಬಾಲಕ ಮೃತಪಟ್ಟಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬೀದಿ ನಾಯಿಗಳ ಹಾವಳಿ ತಡೆಯಲು ಜನರ ಬಳಿ ಸಲಹೆಗಳನ್ನು ಕೇಳಿದ್ದಾರೆ.</p><p>ಭೋಪಾಲ್ನ ಅಯೋಧ್ಯೆ ನಗರದಲ್ಲಿ ಬೀದಿ ನಾಯಿಗಳು 7 ತಿಂಗಳ ಬಾಲಕನ ಮೇಲೆ ದಾಳಿ ಮಾಡಿದ್ದರಿಂದ ಬಾಲಕ ಬುಧವಾರ ( ಜನವರಿ 10) ಮೃತಪಟ್ಟಿತ್ತು. ದಾಳಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.</p><p>ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಯಾದವ್ ‘ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಯಾವ ರೀತಿ ಜಾಗೃತಿ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಜನರಿಂದ ಸಲಹೆಗಳನ್ನು ಕೇಳಲಾಗಿದೆ’. ಮೃತ ಬಾಲಕನ ಕುಟುಂಬಕ್ಕೆ ₹4 ಲಕ್ಷ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಾದವ್ ಆದೇಶಿಸಿದ್ದಾರೆ.</p><p>ಬುಧವಾರವೇ ಬಾಲಕನ ಅಂತ್ಯಕ್ರಿಯೆಯನ್ನು ಕುಟುಂಬದವರು ನೆರವೇರಿಸಿದರು. ಆದರೆ ಶನಿವಾರ ಬಾಲಕನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಬಾಲಕನನ್ನು ನೆಲದ ಮೇಲೆ ಆಡಿಕೊಳ್ಳಲು ಬಿಟ್ಟು ತಾಯಿ ಬೇರೆ ಕೆಲಸದಲ್ಲಿ ತೊಡಗಿದ್ದಳು. ಈ ವೇಳೆ ಬೀದಿ ನಾಯಿಗಳು ದಾಳಿ ಮಾಡಿವೆ’ ಎಂದು ಅಯೋಧ್ಯೆ ನಗರದ ಇನ್ಸ್ಪೆಕ್ಟರ್ ಮಹೇಶ್ ತಿಳಿಸಿದ್ದಾರೆ.</p><p>ಘಟನೆಯ ಬಳಿಕ ಭೋಪಾಲ್ನ ಮುನ್ಸಿಪಲ್ ಕಾರ್ಪೊರೇಷನ್ ಅಯೋಧ್ಯೆ ನಗರದಿಂದ ಎಂಟು ಬೀದಿ ನಾಯಿಗಳನ್ನು ಹಿಡಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>