<p><strong>ಮುಂಬೈ</strong>: ರಾಜಕೀಯ ಕಾರಣಗಳಿಗಾಗಿ ಕೆಲಸಕ್ಕೆ ಅಡ್ಡಿಪಡಿಸುವುದು ಸೇರಿದಂತೆ ಬೆದರಿಕೆ, ಸುಲಿಗೆಗಳಿಂದ ತಮಗೆ ರಕ್ಷಣೆ ಒದಗಿಸಲು ಶಾಸನ ರೂಪಿಸುವಂತೆ ಮಹಾರಾಷ್ಟ್ರದ ಎರಡು ಸರ್ಕಾರಿ ಗುತ್ತಿಗೆದಾರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.</p>.<p>ಮಹಾರಾಷ್ಟ್ರ ರಾಜ್ಯ ಗುತ್ತಿಗೆದಾರರ ಸಂಘ (ಎಂಎಸ್ಸಿಎ) ಮತ್ತು ರಾಜ್ಯ ಎಂಜಿನಿಯರ್ಗಳ ಸಂಘ (ಎಸ್ಇಎ) ಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಹಾಗೂ ಅಜಿತ್ ಪವಾರ್ ಅವರಿಗೆ ಈ ಕುರಿತು ಫೆ. 3ರಂದು ಪತ್ರ ಬರೆದಿವೆ. </p>.<p>‘ರಾಜ್ಯದ ಪ್ರತಿ ಜಿಲ್ಲೆಯಲ್ಲೂ ರಾಜಕೀಯ ವಿರೋಧಿ ಬಣಗಳು ಕೆಲಸ ಸ್ಥಗಿತಗೊಳಿಸುವಂತೆ ಬಲ ಪ್ರಯೋಗ ಮಾಡುತ್ತಿವೆ. ಗುತ್ತಿಗೆದಾರರ ಮೇಲೆ ದೈಹಿಕ ಹಿಂಸೆ ನಡೆಸಲಾಗುತ್ತಿದ್ದು, ಸುಲಿಗೆ ಮಾಡಲಾಗುತ್ತಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. </p>.<p>‘ಶಾಸಕರು, ಸಂಸದರು ಮತ್ತು ಇತರ ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಬೃಹತ್ ಮೊತ್ತದ ಹಣ ಮಂಜೂರು ಮಾಡಿಸಿಕೊಂಡು ಬರುತ್ತಿದ್ದು, ರಾಜಕೀಯ ವಿರೋಧಿ ಗುಂಪುಗಳು ಕಾಮಗಾರಿಗೆ ತಡೆಯೊಡ್ಡುತ್ತಿವೆ. ರಾಜ್ಯದಲ್ಲಿ ₹1 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಗುತ್ತಿಗೆದಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ನಾವು ಫೆಬ್ರುವರಿ ಕೊನೆಯಿಂದ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಎಂಎಸ್ಸಿಎ ಮತ್ತು ಎಸ್ಇಎ ಎರಡು ಸಂಸ್ಥೆಗಳ ಅಧ್ಯಕ್ಷರಾದ ಮಿಲಿಂದ್ ಭೋಸ್ಲೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ರಾಜಕೀಯ ಕಾರಣಗಳಿಗಾಗಿ ಕೆಲಸಕ್ಕೆ ಅಡ್ಡಿಪಡಿಸುವುದು ಸೇರಿದಂತೆ ಬೆದರಿಕೆ, ಸುಲಿಗೆಗಳಿಂದ ತಮಗೆ ರಕ್ಷಣೆ ಒದಗಿಸಲು ಶಾಸನ ರೂಪಿಸುವಂತೆ ಮಹಾರಾಷ್ಟ್ರದ ಎರಡು ಸರ್ಕಾರಿ ಗುತ್ತಿಗೆದಾರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.</p>.<p>ಮಹಾರಾಷ್ಟ್ರ ರಾಜ್ಯ ಗುತ್ತಿಗೆದಾರರ ಸಂಘ (ಎಂಎಸ್ಸಿಎ) ಮತ್ತು ರಾಜ್ಯ ಎಂಜಿನಿಯರ್ಗಳ ಸಂಘ (ಎಸ್ಇಎ) ಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಹಾಗೂ ಅಜಿತ್ ಪವಾರ್ ಅವರಿಗೆ ಈ ಕುರಿತು ಫೆ. 3ರಂದು ಪತ್ರ ಬರೆದಿವೆ. </p>.<p>‘ರಾಜ್ಯದ ಪ್ರತಿ ಜಿಲ್ಲೆಯಲ್ಲೂ ರಾಜಕೀಯ ವಿರೋಧಿ ಬಣಗಳು ಕೆಲಸ ಸ್ಥಗಿತಗೊಳಿಸುವಂತೆ ಬಲ ಪ್ರಯೋಗ ಮಾಡುತ್ತಿವೆ. ಗುತ್ತಿಗೆದಾರರ ಮೇಲೆ ದೈಹಿಕ ಹಿಂಸೆ ನಡೆಸಲಾಗುತ್ತಿದ್ದು, ಸುಲಿಗೆ ಮಾಡಲಾಗುತ್ತಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. </p>.<p>‘ಶಾಸಕರು, ಸಂಸದರು ಮತ್ತು ಇತರ ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಬೃಹತ್ ಮೊತ್ತದ ಹಣ ಮಂಜೂರು ಮಾಡಿಸಿಕೊಂಡು ಬರುತ್ತಿದ್ದು, ರಾಜಕೀಯ ವಿರೋಧಿ ಗುಂಪುಗಳು ಕಾಮಗಾರಿಗೆ ತಡೆಯೊಡ್ಡುತ್ತಿವೆ. ರಾಜ್ಯದಲ್ಲಿ ₹1 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಗುತ್ತಿಗೆದಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ನಾವು ಫೆಬ್ರುವರಿ ಕೊನೆಯಿಂದ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಎಂಎಸ್ಸಿಎ ಮತ್ತು ಎಸ್ಇಎ ಎರಡು ಸಂಸ್ಥೆಗಳ ಅಧ್ಯಕ್ಷರಾದ ಮಿಲಿಂದ್ ಭೋಸ್ಲೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>