<p><strong>ಮುಂಬೈ:</strong> ಈಚೆಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ಹತ್ಯೆಗೀಡಾದ ಎನ್ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಅವರು ಇಂದು (ಶುಕ್ರವಾರ) ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದಾರೆ.</p><p>ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ. </p><p>ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು. </p><p>ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.</p>.ಸಿದ್ದೀಕಿ ಹತ್ಯೆ: ‘ಮಹಾ’ ರಾಜಕೀಯದಲ್ಲಿ ತಲ್ಲಣ.ಲಾರೆನ್ಸ್ ಬಿಷ್ಣೋಯ್ ಸಹಚರರಿಂದ NCP ನಾಯಕ, ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಈಚೆಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ಹತ್ಯೆಗೀಡಾದ ಎನ್ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಅವರು ಇಂದು (ಶುಕ್ರವಾರ) ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದಾರೆ.</p><p>ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ. </p><p>ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು. </p><p>ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.</p>.ಸಿದ್ದೀಕಿ ಹತ್ಯೆ: ‘ಮಹಾ’ ರಾಜಕೀಯದಲ್ಲಿ ತಲ್ಲಣ.ಲಾರೆನ್ಸ್ ಬಿಷ್ಣೋಯ್ ಸಹಚರರಿಂದ NCP ನಾಯಕ, ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>