ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ | ಭಾರಿ ಮಳೆ: ನಾಲ್ಕು ಮಂದಿ ಸಾವು, ಜನಜೀವನ ಅಸ್ತವ್ಯಸ್ತ

Published : 2 ಸೆಪ್ಟೆಂಬರ್ 2024, 10:33 IST
Last Updated : 2 ಸೆಪ್ಟೆಂಬರ್ 2024, 10:33 IST
ಫಾಲೋ ಮಾಡಿ
Comments

ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಗ್ರಾಮೀಣ ಪ್ರದೇಶಗಳ ಜನ ಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರಿ ಮಳೆಯಿಂದಾಗಿ 63 ಹಳ್ಳಿಗಳಿಗೆ ಹಾನಿಯಾಗಿದ್ದು, ಕೆಲವು ಮನೆಗಳು ಕುಸಿದಿವೆ. ಅಲ್ಲದೆ 18 ಹಳ್ಳಿಗಳ 74 ರೈತರಿಗೆ ಸೇರಿದ 45.20 ಹೆಕ್ಟೇರ್‌ ಪ್ರದೇಶದ ಬೆಳೆ ನಷ್ಟವಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, 88 ಪ್ರಾಣಿಗಳು ಸಾವಿಗೀಡಾಗಿವೆ ಎಂದು ಕಂದಾಯ ಅಧಿಕಾರಿಗಳ ಪ್ರಾಥಮಿಕ ವರದಿ ತಿಳಿಸಿದೆ.

ನಾಂದೇಡ್‌ದಲ್ಲಿರುವ ವಿಷ್ಣುಪುರಿ ಜಲಾಶಯದ ಗೇಟ್‌ ಅನ್ನು ಇಂದು (ಸೋಮವಾರ) ಬೆಳಿಗ್ಗೆ ತೆರೆಯಲಾಗಿದೆ. ಜಯಕ್ವಾಡಿ ಅಣೆಕಟ್ಟಿನ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಗೋದಾವರಿ ನದಿ ತಪ್ಪಲಿನಲ್ಲಿರುವ ಹಳ್ಳಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರಿ ಮಳೆಯಿಂದಾಗಿ ಹಿಂಗೋಲಿ ಮತ್ತು ಸೆಂಗಾಂವ್ ನಡುವಿನ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ವಿಷ್ಣುಪುರಿ, ಜಯಕ್ವಾಡಿ ಮತ್ತು ಸಿದ್ದೇಶ್ವರ ಅಣ್ಣೆಕಟ್ಟುಗಳಿಂದ ನೀರು ಹೊರಬಿಡುವ ಕಾರ್ಯ ಪ್ರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT