<p><strong>ಆಗ್ರಾ:</strong> ವಿಶ್ವವಿಖ್ಯಾತ ತಾಜ್ಮಹಲ್ಗೆ ಮಂಗಳವಾರ ಭೇಟಿ ನೀಡಿದ ಮಾಲ್ದೀವ್ಸ್ನ ಅಧ್ಯಕ್ಷ ಮೊಹಮ್ಮದ್ ಮುಯಿಜು ಮತ್ತು ಅವರ ಪತ್ನಿ ಸಾಜಿದಾ ಮೊಹಮ್ಮದ್, ಅಲ್ಲಿನ ವಾಸ್ತುಶಿಲ್ಪದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು.</p>.<p>‘ಈ ಪ್ರವಾಸಿ ತಾಣದ ಸೌಂದರ್ಯವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಇಲ್ಲಿನ ಕಲಾತ್ಮಕತೆಯು ಪ್ರೀತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಗೆ ಉದಾಹರಣೆಯಾಗಿದೆ’ ಎಂದು ಮುಯಿಜು ಅವರು ಪ್ರವಾಸಿಗರ ಪುಸ್ತಕದಲ್ಲಿ ಬರೆದಿದ್ದಾರೆ.</p>.<p>ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಮುಯಿಜು ಮತ್ತು ಅವರ ಪತ್ನಿಯನ್ನು ಉತ್ತರಪ್ರದೇಶದ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು ಆಗ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. </p>.<p>‘ಮುಯಿಜು ಮತ್ತು ಅವರೊಂದಿಗಿದ್ದ ತಂಡವು ತಾಜ್ಮಹಲ್ನ ಇತಿಹಾಸ ಮತ್ತು ವೈಶಿಷ್ಟ್ಯತೆಗಳನ್ನು ಬಹಳ ಆಸಕ್ತಿಯಿಂದ ತಿಳಿದುಕೊಂಡರು’ ಎಂದು ಸಚಿವ ಉಪಾಧ್ಯಾಯ ಅವರು ತಿಳಿಸಿದ್ದಾರೆ.</p>.<p>ಮುಯಿಜು ಭೇಟಿ ಕಾರಣಕ್ಕೆ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ತಾಜ್ಮಹಲ್ಗೆ ಸಾರ್ವಜನಿಕರು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿತ್ತು.</p>.<p>ಕರಕುಶಲ ಗ್ರಾಮವಾಗಿರುವ ಶಿಲ್ಪಗ್ರಾಮಕ್ಕೂ ಮುಯಿಜು ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗ್ರಾ:</strong> ವಿಶ್ವವಿಖ್ಯಾತ ತಾಜ್ಮಹಲ್ಗೆ ಮಂಗಳವಾರ ಭೇಟಿ ನೀಡಿದ ಮಾಲ್ದೀವ್ಸ್ನ ಅಧ್ಯಕ್ಷ ಮೊಹಮ್ಮದ್ ಮುಯಿಜು ಮತ್ತು ಅವರ ಪತ್ನಿ ಸಾಜಿದಾ ಮೊಹಮ್ಮದ್, ಅಲ್ಲಿನ ವಾಸ್ತುಶಿಲ್ಪದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು.</p>.<p>‘ಈ ಪ್ರವಾಸಿ ತಾಣದ ಸೌಂದರ್ಯವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಇಲ್ಲಿನ ಕಲಾತ್ಮಕತೆಯು ಪ್ರೀತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಗೆ ಉದಾಹರಣೆಯಾಗಿದೆ’ ಎಂದು ಮುಯಿಜು ಅವರು ಪ್ರವಾಸಿಗರ ಪುಸ್ತಕದಲ್ಲಿ ಬರೆದಿದ್ದಾರೆ.</p>.<p>ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಮುಯಿಜು ಮತ್ತು ಅವರ ಪತ್ನಿಯನ್ನು ಉತ್ತರಪ್ರದೇಶದ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು ಆಗ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. </p>.<p>‘ಮುಯಿಜು ಮತ್ತು ಅವರೊಂದಿಗಿದ್ದ ತಂಡವು ತಾಜ್ಮಹಲ್ನ ಇತಿಹಾಸ ಮತ್ತು ವೈಶಿಷ್ಟ್ಯತೆಗಳನ್ನು ಬಹಳ ಆಸಕ್ತಿಯಿಂದ ತಿಳಿದುಕೊಂಡರು’ ಎಂದು ಸಚಿವ ಉಪಾಧ್ಯಾಯ ಅವರು ತಿಳಿಸಿದ್ದಾರೆ.</p>.<p>ಮುಯಿಜು ಭೇಟಿ ಕಾರಣಕ್ಕೆ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ತಾಜ್ಮಹಲ್ಗೆ ಸಾರ್ವಜನಿಕರು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿತ್ತು.</p>.<p>ಕರಕುಶಲ ಗ್ರಾಮವಾಗಿರುವ ಶಿಲ್ಪಗ್ರಾಮಕ್ಕೂ ಮುಯಿಜು ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>