<p><strong>ನವದೆಹಲಿ:</strong> ಮಣಿಪುರದ ಇಂಫಾಲದ ಪ್ಯಾಲೇಸ್ ಗ್ರೌಂಡ್ನಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲು ಅವಕಾಶ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. </p><p>ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಹಾಗೂ ಕೆ.ಸಿ. ವೇಣುಗೋಪಾಲ್, ಭಾರತ್ ಜೋಡೊ ನ್ಯಾಯ ಯಾತ್ರೆಯ ಕರಪತ್ರ ಹಾಗೂ ವೆಬ್ಸೈಟ್ ಅನ್ನು ಇಂದು ಬಿಡುಗಡೆಗೊಳಿಸಿದ್ದಾರೆ.</p><p>ಈ ವೇಳೆ ಮಾತನಾಡಿದ ವೇಣುಗೋಪಾಲ್, ಇಂಫಾಲದ ಪ್ಯಾಲೇಸ್ ಗ್ರೌಂಡ್ನಿಂದ ಯಾತ್ರೆ ಆರಂಭಿಸಲು ಮಣಿಪುರದ ಸರ್ಕಾರ ಅವಕಾಶ ನಿರಾಕರಿಸಿದೆ ಎಂದು ಹೇಳಿದ್ದಾರೆ.</p><p>ಮಣಿಪುರದಿಂದ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಈಗ ಇಂಫಾಲದ ಮತ್ತೊಂದು ಸ್ಥಳದಿಂದ ಯಾತ್ರೆ ಆರಂಭಿಸಲು ಅವಕಾಶ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ. </p>.ಭಾರತ್ ಜೋಡೊ ನ್ಯಾಯ್ ಯಾತ್ರೆ | ಜನರ ಸಮಸ್ಯೆ ಆಲಿಸುವುದೇ ಮೂಲ ಉದ್ದೇಶ: ಖರ್ಗೆ.ಭಾರತ್ ಜೋಡೊ ನ್ಯಾಯ್ ಯಾತ್ರೆ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್.<p>ದೇಶದ ದಕ್ಷಿಣದಿಂದ ಪೂರ್ವ ಭಾಗದವರೆಗೆ ಐದು ತಿಂಗಳವರೆಗೆ ನಡೆದ ಭಾರತ್ ಜೋಡೊ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಜ. 14ರಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಕೈಗೊಳ್ಳಲಿದ್ದಾರೆ.</p><p>ಮಣಿಪುರದ ಇಂಫಾಲದಿಂದ ಮುಂಬೈವರೆಗಿನ ಈ ಯಾತ್ರೆಯು 66 ದಿನಗಳವರೆಗೆ ನಡೆಯಲಿದೆ. </p><p>ರಾಹುಲ್ ಅವರ ಈ ಎರಡನೇ ಯಾತ್ರೆಯು ಪೂರ್ವದಿಂದ ಪಶ್ಚಿಮದವರೆಗೆ 110 ಜಿಲ್ಲೆಗಳಲ್ಲಿ, 100 ಲೋಕಸಭಾ ಕ್ಷೇತ್ರಗಳಲ್ಲಿ 6,713 ಕಿ.ಮೀ ಕ್ರಮಿಸಲಿದೆ. ಯಾತ್ರೆಯು ಹೈಬ್ರಿಡ್ ಮಾದರಿಯಲ್ಲಿ ಇರಲಿದ್ದು ಬಸ್ ಸಂಚಾರ ಮತ್ತು ಪಾದಯಾತ್ರೆ ಎರಡನ್ನೂ ಒಳಗೊಂಡಿರಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಣಿಪುರದ ಇಂಫಾಲದ ಪ್ಯಾಲೇಸ್ ಗ್ರೌಂಡ್ನಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲು ಅವಕಾಶ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. </p><p>ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಹಾಗೂ ಕೆ.ಸಿ. ವೇಣುಗೋಪಾಲ್, ಭಾರತ್ ಜೋಡೊ ನ್ಯಾಯ ಯಾತ್ರೆಯ ಕರಪತ್ರ ಹಾಗೂ ವೆಬ್ಸೈಟ್ ಅನ್ನು ಇಂದು ಬಿಡುಗಡೆಗೊಳಿಸಿದ್ದಾರೆ.</p><p>ಈ ವೇಳೆ ಮಾತನಾಡಿದ ವೇಣುಗೋಪಾಲ್, ಇಂಫಾಲದ ಪ್ಯಾಲೇಸ್ ಗ್ರೌಂಡ್ನಿಂದ ಯಾತ್ರೆ ಆರಂಭಿಸಲು ಮಣಿಪುರದ ಸರ್ಕಾರ ಅವಕಾಶ ನಿರಾಕರಿಸಿದೆ ಎಂದು ಹೇಳಿದ್ದಾರೆ.</p><p>ಮಣಿಪುರದಿಂದ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಈಗ ಇಂಫಾಲದ ಮತ್ತೊಂದು ಸ್ಥಳದಿಂದ ಯಾತ್ರೆ ಆರಂಭಿಸಲು ಅವಕಾಶ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ. </p>.ಭಾರತ್ ಜೋಡೊ ನ್ಯಾಯ್ ಯಾತ್ರೆ | ಜನರ ಸಮಸ್ಯೆ ಆಲಿಸುವುದೇ ಮೂಲ ಉದ್ದೇಶ: ಖರ್ಗೆ.ಭಾರತ್ ಜೋಡೊ ನ್ಯಾಯ್ ಯಾತ್ರೆ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್.<p>ದೇಶದ ದಕ್ಷಿಣದಿಂದ ಪೂರ್ವ ಭಾಗದವರೆಗೆ ಐದು ತಿಂಗಳವರೆಗೆ ನಡೆದ ಭಾರತ್ ಜೋಡೊ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಜ. 14ರಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಕೈಗೊಳ್ಳಲಿದ್ದಾರೆ.</p><p>ಮಣಿಪುರದ ಇಂಫಾಲದಿಂದ ಮುಂಬೈವರೆಗಿನ ಈ ಯಾತ್ರೆಯು 66 ದಿನಗಳವರೆಗೆ ನಡೆಯಲಿದೆ. </p><p>ರಾಹುಲ್ ಅವರ ಈ ಎರಡನೇ ಯಾತ್ರೆಯು ಪೂರ್ವದಿಂದ ಪಶ್ಚಿಮದವರೆಗೆ 110 ಜಿಲ್ಲೆಗಳಲ್ಲಿ, 100 ಲೋಕಸಭಾ ಕ್ಷೇತ್ರಗಳಲ್ಲಿ 6,713 ಕಿ.ಮೀ ಕ್ರಮಿಸಲಿದೆ. ಯಾತ್ರೆಯು ಹೈಬ್ರಿಡ್ ಮಾದರಿಯಲ್ಲಿ ಇರಲಿದ್ದು ಬಸ್ ಸಂಚಾರ ಮತ್ತು ಪಾದಯಾತ್ರೆ ಎರಡನ್ನೂ ಒಳಗೊಂಡಿರಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>