<p><strong>ಇಂಫಾಲ್/ ಚುರಚಂದಪುರ:</strong> ಕುಕಿ–ಜೋ ಬುಡಕಟ್ಟು ಜನರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಬೇಕೆಂದು ಆಗ್ರಹಿಸಿ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬುಧವಾರ ಈ ಸಮುದಾಯಗಳಿಂದ ಪ್ರತಿಭಟನಾ ರ್ಯಾಲಿ ನಡೆಯಿತು.</p>.<p>ಚುರಚಾಂದಪುರದ ಲಮ್ಕಾ ಪಬ್ಲಿಕ್ ಶಾಲಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸ್ಮರಣಾ ಗೋಡೆಯವರೆಗಿನ ಮೂರು ಕಿ.ಮೀ.ವರೆಗೂ ಪ್ರತಿಭಟನಕಾರರು ರ್ಯಾಲಿ ನಡೆಸಿದರು.</p>.<p>ಕಣಿವೆ ರಾಜ್ಯದಲ್ಲಿ ಕುಕಿ ಮತ್ತು ಜೋ ಸಮುದಾಯದವರು ಹೆಚ್ಚಿರುವ ಪ್ರದೇಶದಲ್ಲಿ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಲು ಕೇಂದ್ರ ಸರ್ಕಾರ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. </p>.<p>ಜೋ ಸಮುದಾಯ ಒಕ್ಕೂಟದ ಸಂಚಾಲಕ ಆಲ್ಬರ್ಟ್ ರೆಂತ್ಲೀ ಮಾತನಾಡಿ, ‘ಕೇಂದ್ರಕ್ಕೆ ಈ ಹಿಂದೆಯೂ ಮನವಿ ಸಲ್ಲಿಸಲಾಗಿತ್ತು. ಆದರೆ, ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ದೂರಿದರು. </p>.<p>ಕಾಂಗ್ಪೊಕ್ಪಿ, ಫರ್ಜಾಲ್, ತೆಂಗನೂಪಾಲ್, ಸಾಯಿಕುಲ್, ಜಂಪ್ಯುಟ್ಲಾಂಗ್ನಲ್ಲಿ ರ್ಯಾಲಿ ನಡೆಯಿತು. ಚುರಚಾಂದಪುರ, ಬಿಷ್ಣುಪುರ, ಕಾಂಗ್ಪೊಕ್ಪಿ ಹಾಗೂ ಇಂಫಾಲ್ ಪೂರ್ವ ಜಿಲ್ಲೆಯ ಅಂತರ ಜಿಲ್ಲಾ ಗಡಿ ಪ್ರದೇಶ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತೆಯಾಗಿ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್/ ಚುರಚಂದಪುರ:</strong> ಕುಕಿ–ಜೋ ಬುಡಕಟ್ಟು ಜನರಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಬೇಕೆಂದು ಆಗ್ರಹಿಸಿ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬುಧವಾರ ಈ ಸಮುದಾಯಗಳಿಂದ ಪ್ರತಿಭಟನಾ ರ್ಯಾಲಿ ನಡೆಯಿತು.</p>.<p>ಚುರಚಾಂದಪುರದ ಲಮ್ಕಾ ಪಬ್ಲಿಕ್ ಶಾಲಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸ್ಮರಣಾ ಗೋಡೆಯವರೆಗಿನ ಮೂರು ಕಿ.ಮೀ.ವರೆಗೂ ಪ್ರತಿಭಟನಕಾರರು ರ್ಯಾಲಿ ನಡೆಸಿದರು.</p>.<p>ಕಣಿವೆ ರಾಜ್ಯದಲ್ಲಿ ಕುಕಿ ಮತ್ತು ಜೋ ಸಮುದಾಯದವರು ಹೆಚ್ಚಿರುವ ಪ್ರದೇಶದಲ್ಲಿ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಲು ಕೇಂದ್ರ ಸರ್ಕಾರ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. </p>.<p>ಜೋ ಸಮುದಾಯ ಒಕ್ಕೂಟದ ಸಂಚಾಲಕ ಆಲ್ಬರ್ಟ್ ರೆಂತ್ಲೀ ಮಾತನಾಡಿ, ‘ಕೇಂದ್ರಕ್ಕೆ ಈ ಹಿಂದೆಯೂ ಮನವಿ ಸಲ್ಲಿಸಲಾಗಿತ್ತು. ಆದರೆ, ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ದೂರಿದರು. </p>.<p>ಕಾಂಗ್ಪೊಕ್ಪಿ, ಫರ್ಜಾಲ್, ತೆಂಗನೂಪಾಲ್, ಸಾಯಿಕುಲ್, ಜಂಪ್ಯುಟ್ಲಾಂಗ್ನಲ್ಲಿ ರ್ಯಾಲಿ ನಡೆಯಿತು. ಚುರಚಾಂದಪುರ, ಬಿಷ್ಣುಪುರ, ಕಾಂಗ್ಪೊಕ್ಪಿ ಹಾಗೂ ಇಂಫಾಲ್ ಪೂರ್ವ ಜಿಲ್ಲೆಯ ಅಂತರ ಜಿಲ್ಲಾ ಗಡಿ ಪ್ರದೇಶ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತೆಯಾಗಿ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>