<p><strong>ಮುಂಬೈ</strong>: ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವಿಗೀಡಾಗಿದ್ದಾರೆ.</p><p>ವಲುಜ್ ಕೈಗಾರಿಕಾ ಪ್ರದೇಶದಲ್ಲಿರುವ ಸನ್ಶೈನ್ ಎಂಟರ್ಪ್ರೈಸಸ್ ಘಟಕದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. </p><p>ಘಟನೆ ನಡೆದಾಗ 13 ಮಂದಿ ಕಾರ್ಮಿಕರು ಆವರಣದಲ್ಲಿ ಮಲಗಿದ್ದರು. ಅವರಲ್ಲಿ ಆರು ಮಂದಿ ಸಾವಿಗೀಡಾಗಿದ್ದರೆ, ಏಳು ಮಂದಿ ಕಾರ್ಖಾನೆಯ ಮೇಲ್ಛಾವಣಿಯನ್ನು ಒಡೆದು ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>‘ಕಾಟನ್ ಮತ್ತು ಲೆದರ್ ಹ್ಯಾಂಡ್ ಗ್ಲೌಸ್ ತಯಾರಿಸುವ ಸನ್ಶೈನ್ ಎಂಟರ್ಪ್ರೈಸಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ 1.15ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ವಿಷಯ ತಿಳಿಯಿತು’ ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ತಿಳಿಸಿದ್ದಾರೆ.</p><p>ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಳಗಿನ ಜಾವ 3.30ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತಂದಿದೆ.</p><p>ಬದುಕುಳಿದ ಕಾರ್ಮಿಕರಿಗೆ ಗಾಯಗಳಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವಿಗೀಡಾಗಿದ್ದಾರೆ.</p><p>ವಲುಜ್ ಕೈಗಾರಿಕಾ ಪ್ರದೇಶದಲ್ಲಿರುವ ಸನ್ಶೈನ್ ಎಂಟರ್ಪ್ರೈಸಸ್ ಘಟಕದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. </p><p>ಘಟನೆ ನಡೆದಾಗ 13 ಮಂದಿ ಕಾರ್ಮಿಕರು ಆವರಣದಲ್ಲಿ ಮಲಗಿದ್ದರು. ಅವರಲ್ಲಿ ಆರು ಮಂದಿ ಸಾವಿಗೀಡಾಗಿದ್ದರೆ, ಏಳು ಮಂದಿ ಕಾರ್ಖಾನೆಯ ಮೇಲ್ಛಾವಣಿಯನ್ನು ಒಡೆದು ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>‘ಕಾಟನ್ ಮತ್ತು ಲೆದರ್ ಹ್ಯಾಂಡ್ ಗ್ಲೌಸ್ ತಯಾರಿಸುವ ಸನ್ಶೈನ್ ಎಂಟರ್ಪ್ರೈಸಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ 1.15ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ವಿಷಯ ತಿಳಿಯಿತು’ ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ತಿಳಿಸಿದ್ದಾರೆ.</p><p>ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಳಗಿನ ಜಾವ 3.30ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತಂದಿದೆ.</p><p>ಬದುಕುಳಿದ ಕಾರ್ಮಿಕರಿಗೆ ಗಾಯಗಳಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>