‘ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿಯ ಅಕ್ರಮ ನಡೆದಿದೆ. ಇದರ ಬಳಿಕ ಕಾಂಗ್ರೆಸ್ ಯಾವುದೇ ಪ್ರಮಾಣಿಕೃತ ಕಳ್ಳ ಹಾಗೂ ಲೂಟಿಕೋರನಿಂದ ನಿರೀಕ್ಷಿಸಿದಂತೆ ನಡೆದುಕೊಂಡಿದೆ. ಕಾಂಗ್ರೆಸ್ ವೃತ್ತಿಪರ ಕಳ್ಳ ಹಾಗೂ ಭ್ರಷ್ಟ ಪಕ್ಷದಂತೆ ನಡೆದುಕೊಳ್ಳುತ್ತಿದೆ. ಸಿದ್ದರಾಮಯ್ಯ ಕೂಡ ಇದೇ ನಡೆಯನ್ನು ಅನುಸರಿಸುತ್ತಿದ್ದಾರೆ’ ಎಂದು ಪೂನಾವಾಲ ಹೇಳಿದ್ದಾರೆ.
ಮುಡಾದಲ್ಲಿ ಸುಮಾರು ₹ 5 ಸಾವಿರ ಕೋಟಿ ಹಗರಣ ನಡೆದಿದ್ದು, ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.