<p><strong>ಮುಂಬೈ:</strong> ಇದೇ ವರ್ಷ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್ಸಿಪಿಗೆ 80 ರಿಂದ 90 ಸ್ಥಾನಗಳನ್ನು ನೀಡಬೇಕು ಎಂದು ಎನ್ಸಿಪಿ ಹಿರಿಯ ಮುಖಂಡ ಹಾಗೂ ಸಚಿವ ಛಗನ್ ಭುಜಬಲ್ ಒತ್ತಾಯಿಸಿದ್ದಾರೆ.</p><p>ಪಕ್ಷದ ಸಭೆಯಲ್ಲಿ ಮಾತನಾಡಿದ ಭುಜಬಲ್, ನಾವು ಮೈತ್ರಿ (ಬಿಜೆಪಿ–ಶಿವಸೇನೆ) ಸೇರಿದಾಗ ನಮಗೆ ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲು 80 ರಿಂದ 90 ಸ್ಥಾನಗಳನ್ನು ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ, ಈ ಲೋಕಸಭಾ ಚುನಾವಣೆಯಲ್ಲಿ ನಮಗೆ ಬಹಳ ಕಡಿಮೆ ಸ್ಥಾನಗಳನ್ನು ನೀಡಲಾಗಿದೆ ಎಂದರು.</p><p>ಎನ್ಸಿಪಿ ವಿಧಾನಸಭೆಯಲ್ಲಿ 50 ರಿಂದ 60 ಸ್ಥಾನಗಳನ್ನು ಗೆಲ್ಲಬೇಕಾದರೆ ಹೆಚ್ಚಿನ ಸ್ಥಾನಗಳಲ್ಲಿ ನಾವು ಸ್ಪರ್ಧೆ ಮಾಡಬೇಕು. ಇದನ್ನು ನಾವು ಅವರಿಗೆ (ಬಿಜೆಪಿ–ಶಿವಸೇನೆ) ಹೇಳಬೇಕಿದೆ ಎಂದರು. </p><p>ಛಗನ್ ಭುಜಬಲ್ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ರಾಜ್ಯದಲ್ಲಿ ದೊಡ್ಡ ಪಕ್ಷವಾಗಿದ್ದು, ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೇಳಿದ್ದಾರೆ. </p><p>2019ರ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳನ್ನು ಗೆದ್ದಿದ್ದರೆ, ಎನ್ಸಿಪಿ (ಶರದ್–ಅಜಿತ್) 54 ಸ್ಥಾನಗಳನ್ನು ಗೆದ್ದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಇದೇ ವರ್ಷ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್ಸಿಪಿಗೆ 80 ರಿಂದ 90 ಸ್ಥಾನಗಳನ್ನು ನೀಡಬೇಕು ಎಂದು ಎನ್ಸಿಪಿ ಹಿರಿಯ ಮುಖಂಡ ಹಾಗೂ ಸಚಿವ ಛಗನ್ ಭುಜಬಲ್ ಒತ್ತಾಯಿಸಿದ್ದಾರೆ.</p><p>ಪಕ್ಷದ ಸಭೆಯಲ್ಲಿ ಮಾತನಾಡಿದ ಭುಜಬಲ್, ನಾವು ಮೈತ್ರಿ (ಬಿಜೆಪಿ–ಶಿವಸೇನೆ) ಸೇರಿದಾಗ ನಮಗೆ ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲು 80 ರಿಂದ 90 ಸ್ಥಾನಗಳನ್ನು ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ, ಈ ಲೋಕಸಭಾ ಚುನಾವಣೆಯಲ್ಲಿ ನಮಗೆ ಬಹಳ ಕಡಿಮೆ ಸ್ಥಾನಗಳನ್ನು ನೀಡಲಾಗಿದೆ ಎಂದರು.</p><p>ಎನ್ಸಿಪಿ ವಿಧಾನಸಭೆಯಲ್ಲಿ 50 ರಿಂದ 60 ಸ್ಥಾನಗಳನ್ನು ಗೆಲ್ಲಬೇಕಾದರೆ ಹೆಚ್ಚಿನ ಸ್ಥಾನಗಳಲ್ಲಿ ನಾವು ಸ್ಪರ್ಧೆ ಮಾಡಬೇಕು. ಇದನ್ನು ನಾವು ಅವರಿಗೆ (ಬಿಜೆಪಿ–ಶಿವಸೇನೆ) ಹೇಳಬೇಕಿದೆ ಎಂದರು. </p><p>ಛಗನ್ ಭುಜಬಲ್ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ರಾಜ್ಯದಲ್ಲಿ ದೊಡ್ಡ ಪಕ್ಷವಾಗಿದ್ದು, ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೇಳಿದ್ದಾರೆ. </p><p>2019ರ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳನ್ನು ಗೆದ್ದಿದ್ದರೆ, ಎನ್ಸಿಪಿ (ಶರದ್–ಅಜಿತ್) 54 ಸ್ಥಾನಗಳನ್ನು ಗೆದ್ದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>