ಇದಕ್ಕೂ ಮುನ್ನ, ಬಿಹಾರದ ಪಟ್ನಾದಲ್ಲಿ ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಎಂಬ ಇಬ್ಬರನ್ನು ಬಂಧಿಸಲಾಗಿತ್ತು. ಇವರು ಪಟ್ನಾದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಹಂಚಿದ್ದರು ಎಂದು ತಿಳಿದುಬಂದಿದೆ.
ಅಶುತೋಷ್ ವಿದ್ಯಾರ್ಥಿಗಳಿಗಾಗಿ ಗೋಪ್ಯ ನಿವಾಸದ ವ್ಯವಸ್ಥೆ ಮಾಡಿದ್ದರು. ಮನೀಶ್ ವಿದ್ಯಾರ್ಥಿಗಳನ್ನು ಅಲ್ಲಿಗೆ ಕರೆದೊಯ್ದು ಪ್ರಶ್ನೆಪತ್ರಿಕೆ ನೀಡುತ್ತಿದ್ದರು ಎಂಬ ಮಾಹಿತಿ ತನಿಖೆಯಿಂದ ತಿಳಿದುಬಂದಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಒಂದೂವರೆ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿಕೆಯಂತಹ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿತ್ತು.