<p><strong>ಕೊರಾಪುಟ್(ಒಡಿಶಾ):</strong> ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಗೆ ಆಂಥ್ರಾಕ್ಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಂಗಳವಾರ ಮತ್ತು ಗುರುವಾರದ ನಡುವೆ ಲಕ್ಷ್ಮೀಪುರ ಬ್ಲಾಕ್ನಲ್ಲಿ ಈ ಮೂರು ಪ್ರಕರಣಗಳು ಕಂಡುಬಂದಿವೆ.</p><p>ಬ್ಯಾಸಿಲಸ್ ಆಂಥ್ರಾಸಿಸ್ ಎಂಬ ಬ್ಯಾಕ್ಟೀರಿಯಾದಿಂದ ಆಂಥ್ರಾಕ್ಸ್ ಬರುತ್ತದೆ.</p><p>‘ಮೂವರಲ್ಲಿ ಆಂಥ್ರಾಕ್ಸ್ ಪಾಸಿಟಿವ್ ಬಂದಿದ್ದು, ಅವರನ್ನು ಲಕ್ಷ್ಮೀಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಂಥ್ರಾಕ್ಸ್ ಸೋಂಕಿತ ಜಾನುವಾರು ಕಳೇಬರದಿಂದ ಸೋಂಕು ಹರಡಿಬಹುದು’ಎಂದು ಕೊರಾಪುಟ್ನ ಹೆಚ್ಚುವರಿ ಜಿಲ್ಲಾ ಆರೋಗ್ಯ ಅಧಿಕಾರಿ ಸತ್ಯಸಾಯಿ ಸ್ವರೂಪ್ ಹೇಳಿದ್ದಾರೆ.</p> <p>ಈ ಸಂಬಂಧ ಆಂಥ್ರಾಕ್ಸ್ ಪ್ರಕರಣಗಳು ಕಂಡುಬಂದಿರುವ ಕುತಿಂಗ ಹಳ್ಳಿಗೆ ಆರೋಗ್ಯ ತಜ್ಞರ ತಂಡವನ್ನು ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸದ್ಯ, ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಈ ಸಂಬಂಧ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸ್ವರೂಪ್ ಹೇಳಿದ್ದಾರೆ.</p><p>‘ಸೋಂಕು ಕಂಡುಬಂದಿರುವ ಪ್ರದೇಶಗಳಲ್ಲಿ ಮಾಹಿತಿ, ತಿಳುವಳಿಕೆ ಮತ್ತು ಸಂವಹನ(ಐಇಸಿ) ಕೇಂದ್ರಗಳನ್ನು ತೆರೆಯಲಾಗಿದೆ. ಪರಿಸ್ಥಿತಿ ಮೇಲೆ ನಿಕಟ ನಿಗಾ ಇಡಲಾಗಿದ್ದು, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸ್ಥಿತಿ ಅವಲೋಕನಕ್ಕೆ ಸೂಕ್ತ ಪ್ರಮಾಣದ ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ಎಂದೂ ಅವರು ತಿಳಿಸಿದ್ದಾರೆ.</p><p>. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಾಪುಟ್(ಒಡಿಶಾ):</strong> ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಗೆ ಆಂಥ್ರಾಕ್ಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಂಗಳವಾರ ಮತ್ತು ಗುರುವಾರದ ನಡುವೆ ಲಕ್ಷ್ಮೀಪುರ ಬ್ಲಾಕ್ನಲ್ಲಿ ಈ ಮೂರು ಪ್ರಕರಣಗಳು ಕಂಡುಬಂದಿವೆ.</p><p>ಬ್ಯಾಸಿಲಸ್ ಆಂಥ್ರಾಸಿಸ್ ಎಂಬ ಬ್ಯಾಕ್ಟೀರಿಯಾದಿಂದ ಆಂಥ್ರಾಕ್ಸ್ ಬರುತ್ತದೆ.</p><p>‘ಮೂವರಲ್ಲಿ ಆಂಥ್ರಾಕ್ಸ್ ಪಾಸಿಟಿವ್ ಬಂದಿದ್ದು, ಅವರನ್ನು ಲಕ್ಷ್ಮೀಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಂಥ್ರಾಕ್ಸ್ ಸೋಂಕಿತ ಜಾನುವಾರು ಕಳೇಬರದಿಂದ ಸೋಂಕು ಹರಡಿಬಹುದು’ಎಂದು ಕೊರಾಪುಟ್ನ ಹೆಚ್ಚುವರಿ ಜಿಲ್ಲಾ ಆರೋಗ್ಯ ಅಧಿಕಾರಿ ಸತ್ಯಸಾಯಿ ಸ್ವರೂಪ್ ಹೇಳಿದ್ದಾರೆ.</p> <p>ಈ ಸಂಬಂಧ ಆಂಥ್ರಾಕ್ಸ್ ಪ್ರಕರಣಗಳು ಕಂಡುಬಂದಿರುವ ಕುತಿಂಗ ಹಳ್ಳಿಗೆ ಆರೋಗ್ಯ ತಜ್ಞರ ತಂಡವನ್ನು ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸದ್ಯ, ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಈ ಸಂಬಂಧ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸ್ವರೂಪ್ ಹೇಳಿದ್ದಾರೆ.</p><p>‘ಸೋಂಕು ಕಂಡುಬಂದಿರುವ ಪ್ರದೇಶಗಳಲ್ಲಿ ಮಾಹಿತಿ, ತಿಳುವಳಿಕೆ ಮತ್ತು ಸಂವಹನ(ಐಇಸಿ) ಕೇಂದ್ರಗಳನ್ನು ತೆರೆಯಲಾಗಿದೆ. ಪರಿಸ್ಥಿತಿ ಮೇಲೆ ನಿಕಟ ನಿಗಾ ಇಡಲಾಗಿದ್ದು, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸ್ಥಿತಿ ಅವಲೋಕನಕ್ಕೆ ಸೂಕ್ತ ಪ್ರಮಾಣದ ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ಎಂದೂ ಅವರು ತಿಳಿಸಿದ್ದಾರೆ.</p><p>. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>