<p><strong>ಡ್ರಾಸ್ (ಕಾರ್ಗಿಲ್): </strong>ಭಯೋತ್ಪಾದನೆ ಹಾಗೂ ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ ಎಂದು ಕಾರ್ಗಿಲ್ನ ಡ್ರಾಸ್ ಕಣಿವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.</p><p>ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.</p><p>‘ಈ ಜಾಗದಿಂದ ನನ್ನ ಮಾತುಗಳು ಭಯೋತ್ಪಾದನೆಗೆ ಬೆಂಬಲ ನೀಡುವುವರಿಗೆ ನೇರವಾಗಿ ಕೇಳುತ್ತವೆ. ಸರಿಯಾಗಿ ಕೇಳಿಸಿಕೊಳ್ಳಿ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ’ ಎಂದು ಪರೋಕ್ಷವಾಗಿ ಪ್ರತ್ಯೇಕವಾದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.</p><p>ಇತಿಹಾಸದಿಂದ ಪಾಕಿಸ್ತಾನ ಎಂದಿಗೂ ಪಾಠ ಕಲಿಯಲಿಲ್ಲ. ಇದರಿಂದ ಪದೇ ಪದೇ ಪೆಟ್ಟು ತಿನ್ನುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಪಾಠ ಕಲಿಯದ ಪಾಕಿಸ್ತಾನ ಕಾಲು ಕೆರೆದುಕೊಂಡು ಜಗಳ ಮಾಡಲು ಹೋಗಿ ಪ್ರತಿ ಭಾರಿ ಮುಖಭಂಗ ಅನುಭವಿಸಿದೆ ಎಂದು ಹೇಳಿದ್ದಾರೆ.</p><p>ರಾಷ್ಟ್ರದ ಸೇವೆಗಾಗಿ ಪ್ರಾಣ ತ್ಯಾಗ ಮಾಡಿದ ಸಶಸ್ತ್ರ ಪಡೆಗಳ ಅಧಿಕಾರಿಗಳು ಮತ್ತು ಸೈನಿಕರಿಗೆ ಗೌರವ ಸಲ್ಲಿಸಿದ ಅವರು, ನಮ್ಮ ಯೋಧರ ಬಲಿದಾನ ಅಮರ ಎಂದು ಹೇಳಿದರು.</p><p>ಕಾರ್ಗಿಲ್ನಲ್ಲಿ ಸುಮಾರು ಮೂರು ತಿಂಗಳ ಕಾಲ ನಡೆದ ಯುದ್ಧವು 1999ರ ಜುಲೈ 26ರಂದು ಅಧಿಕೃತವಾಗಿ ಕೊನೆಗೊಂಡಿತು. ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ವಿಜಯ ಸಾಧಿಸಿದ ಸ್ಮರಣಾರ್ಥ ಈ ದಿನವನ್ನು 'ಕಾರ್ಗಿಲ್ ವಿಜಯ ದಿವಸ' ಎಂದು ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡ್ರಾಸ್ (ಕಾರ್ಗಿಲ್): </strong>ಭಯೋತ್ಪಾದನೆ ಹಾಗೂ ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ ಎಂದು ಕಾರ್ಗಿಲ್ನ ಡ್ರಾಸ್ ಕಣಿವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.</p><p>ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.</p><p>‘ಈ ಜಾಗದಿಂದ ನನ್ನ ಮಾತುಗಳು ಭಯೋತ್ಪಾದನೆಗೆ ಬೆಂಬಲ ನೀಡುವುವರಿಗೆ ನೇರವಾಗಿ ಕೇಳುತ್ತವೆ. ಸರಿಯಾಗಿ ಕೇಳಿಸಿಕೊಳ್ಳಿ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ’ ಎಂದು ಪರೋಕ್ಷವಾಗಿ ಪ್ರತ್ಯೇಕವಾದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.</p><p>ಇತಿಹಾಸದಿಂದ ಪಾಕಿಸ್ತಾನ ಎಂದಿಗೂ ಪಾಠ ಕಲಿಯಲಿಲ್ಲ. ಇದರಿಂದ ಪದೇ ಪದೇ ಪೆಟ್ಟು ತಿನ್ನುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಪಾಠ ಕಲಿಯದ ಪಾಕಿಸ್ತಾನ ಕಾಲು ಕೆರೆದುಕೊಂಡು ಜಗಳ ಮಾಡಲು ಹೋಗಿ ಪ್ರತಿ ಭಾರಿ ಮುಖಭಂಗ ಅನುಭವಿಸಿದೆ ಎಂದು ಹೇಳಿದ್ದಾರೆ.</p><p>ರಾಷ್ಟ್ರದ ಸೇವೆಗಾಗಿ ಪ್ರಾಣ ತ್ಯಾಗ ಮಾಡಿದ ಸಶಸ್ತ್ರ ಪಡೆಗಳ ಅಧಿಕಾರಿಗಳು ಮತ್ತು ಸೈನಿಕರಿಗೆ ಗೌರವ ಸಲ್ಲಿಸಿದ ಅವರು, ನಮ್ಮ ಯೋಧರ ಬಲಿದಾನ ಅಮರ ಎಂದು ಹೇಳಿದರು.</p><p>ಕಾರ್ಗಿಲ್ನಲ್ಲಿ ಸುಮಾರು ಮೂರು ತಿಂಗಳ ಕಾಲ ನಡೆದ ಯುದ್ಧವು 1999ರ ಜುಲೈ 26ರಂದು ಅಧಿಕೃತವಾಗಿ ಕೊನೆಗೊಂಡಿತು. ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ವಿಜಯ ಸಾಧಿಸಿದ ಸ್ಮರಣಾರ್ಥ ಈ ದಿನವನ್ನು 'ಕಾರ್ಗಿಲ್ ವಿಜಯ ದಿವಸ' ಎಂದು ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>