<p><strong>ಚಂಡೀಗಢ</strong>: ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ನಡೆಸುತ್ತಿರುವ ರೈತರ ಜೊತೆ ಇಂದು ಕೇಂದ್ರದ ಮೂವರು ಸಚಿವರು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.</p><p>ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಸಂಜೆ 5 ಗಂಟೆಗ ರೈತರ ಜೊತೆ ಅವರ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. </p><p>ಇದು ರೈತರು ಮತ್ತು ಸರ್ಕಾರದ ನಡುವಿನ ಮೂರನೇ ಸುತ್ತಿನ ಮಾತುಕತೆಯಾಗಿದ್ದು, ಫೆಬ್ರುವರಿ 8 ಮತ್ತು 12ರಂದು ನಡೆದ ಸಭೆಗಳು ಯಾವುದೇ ಪರಿಹಾರ ಕಂಡುಹಿಡಿಯುವಲ್ಲಿ ವಿಫಲವಾಗಿದ್ದವು.</p> <p>ತಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ‘ದೆಹಲಿ ಚಲೋ’ ನಡೆಸುತ್ತಿರುವ ರೈತರು, ಪಂಜಾಬ್ ಮತ್ತು ಹರಿಯಾಣದ ಶಂಭು ಮತ್ತು ಖನೌರಿ ಗಡಿಗಳಲ್ಲಿ ಸಮಾವೇಶಗೊಳ್ಳುತ್ತಿದ್ದಾರೆ.</p><p>ಸಂಜೆ ಸಭೆ ಮುಗಿಯುವವರೆಗೂ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವ ಯಾವುದೇ ಪ್ರಯತ್ನ ಮಾಡುವುದಿಲ್ಲ ಎಂದು ರೈತ ನಾಯಕರು ತಿಳಿಸಿದ್ದಾರೆ. </p><p>ಈ ನಡುವೆ, ಭಾರ್ತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಮತ್ತು ಬಿಕೆಯು ದಕೌಂಡ (ಧನೇರ್) ಇಂದು ಚಂಡೀಗಢ ರಾಜ್ಯದಲ್ಲಿ 'ರೈಲ್ ರೋಕೋ' ಘೋಷಿಸಿವೆ. ಮಧ್ಯಾಹ್ನ 12 ರಿಂದ ಸಂಜೆ 4ರವರೆಗೆ ಏಳು ಸ್ಥಳಗಳಲ್ಲಿ ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಾರೆ.</p> .ಎಂಎಸ್ಪಿಗೆ ಕನಿಷ್ಠ ₹6 ಲಕ್ಷ ಕೋಟಿ ಬೇಕು: ತಜ್ಞರ ಹೇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ನಡೆಸುತ್ತಿರುವ ರೈತರ ಜೊತೆ ಇಂದು ಕೇಂದ್ರದ ಮೂವರು ಸಚಿವರು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.</p><p>ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಸಂಜೆ 5 ಗಂಟೆಗ ರೈತರ ಜೊತೆ ಅವರ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. </p><p>ಇದು ರೈತರು ಮತ್ತು ಸರ್ಕಾರದ ನಡುವಿನ ಮೂರನೇ ಸುತ್ತಿನ ಮಾತುಕತೆಯಾಗಿದ್ದು, ಫೆಬ್ರುವರಿ 8 ಮತ್ತು 12ರಂದು ನಡೆದ ಸಭೆಗಳು ಯಾವುದೇ ಪರಿಹಾರ ಕಂಡುಹಿಡಿಯುವಲ್ಲಿ ವಿಫಲವಾಗಿದ್ದವು.</p> <p>ತಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ‘ದೆಹಲಿ ಚಲೋ’ ನಡೆಸುತ್ತಿರುವ ರೈತರು, ಪಂಜಾಬ್ ಮತ್ತು ಹರಿಯಾಣದ ಶಂಭು ಮತ್ತು ಖನೌರಿ ಗಡಿಗಳಲ್ಲಿ ಸಮಾವೇಶಗೊಳ್ಳುತ್ತಿದ್ದಾರೆ.</p><p>ಸಂಜೆ ಸಭೆ ಮುಗಿಯುವವರೆಗೂ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವ ಯಾವುದೇ ಪ್ರಯತ್ನ ಮಾಡುವುದಿಲ್ಲ ಎಂದು ರೈತ ನಾಯಕರು ತಿಳಿಸಿದ್ದಾರೆ. </p><p>ಈ ನಡುವೆ, ಭಾರ್ತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಮತ್ತು ಬಿಕೆಯು ದಕೌಂಡ (ಧನೇರ್) ಇಂದು ಚಂಡೀಗಢ ರಾಜ್ಯದಲ್ಲಿ 'ರೈಲ್ ರೋಕೋ' ಘೋಷಿಸಿವೆ. ಮಧ್ಯಾಹ್ನ 12 ರಿಂದ ಸಂಜೆ 4ರವರೆಗೆ ಏಳು ಸ್ಥಳಗಳಲ್ಲಿ ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಾರೆ.</p> .ಎಂಎಸ್ಪಿಗೆ ಕನಿಷ್ಠ ₹6 ಲಕ್ಷ ಕೋಟಿ ಬೇಕು: ತಜ್ಞರ ಹೇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>