<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಎಸೆಯುವ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಶನಿವಾರ ಹೇಳಿದರು.</p>.<p>ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧಿಸುವುದಾಗಿ ಪಕ್ಷವು ಘೋಷಿಸಿದ ಬೆನ್ನಲ್ಲೇ ಈ ಹೇಳಿಕೆ ನೀಡಿದರು.</p>.<p>ಡಿ.ರಾಜಾ ಅವರ ಪತ್ನಿ ಎಲ್ಡಿಎಫ್ ಮೈತ್ರಿ ಪರವಾಗಿ ವಯನಾಡ್ನಿಂದ ಸ್ಪರ್ಧಿಸುತ್ತಿದ್ದಾರೆ.</p>.<p>‘ಮೈತ್ರಿಕೂಟದ ಒಪ್ಪಂದದ ಅನುಸಾರ ಸಿಪಿಐ ನಾಲ್ಕು ಸೀಟುಗಳನ್ನು ಪಡೆದಿತ್ತು. ಅದರಲ್ಲಿ ವಯನಾಡ್ ಕೂಡ ಒಂದು. ಹೀಗಾಗಿ ಅಲ್ಲಿ ಅಭ್ಯರ್ಥಿಯನ್ನು ಘೋಷಿಸಿದ್ದೇವೆ. ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಆಯಾ ಪಕ್ಷಗಳ ವಿಶೇಷಾಧಿಕಾರ. ಈ ವಿಷಯದಲ್ಲಿ ಇದು ಕಾಂಗ್ರೆಸ್ ಪಕ್ಷದ ವಿಶೇಷಾಧಿಕಾರ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ, ‘ರಾಹುಲ್ ಗಾಂಧಿ ರಾಜ್ಯ ನಾಯಕ ಅಲ್ಲ, ರಾಷ್ಟ್ರ ನಾಯಕ. ಬಿಜೆಪಿಗೆ ತೀವ್ರ ಸ್ಪರ್ಧೆಯೊಡ್ಡುವ ಯಾವುದಾದರೂ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಎಸೆಯುವ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಶನಿವಾರ ಹೇಳಿದರು.</p>.<p>ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧಿಸುವುದಾಗಿ ಪಕ್ಷವು ಘೋಷಿಸಿದ ಬೆನ್ನಲ್ಲೇ ಈ ಹೇಳಿಕೆ ನೀಡಿದರು.</p>.<p>ಡಿ.ರಾಜಾ ಅವರ ಪತ್ನಿ ಎಲ್ಡಿಎಫ್ ಮೈತ್ರಿ ಪರವಾಗಿ ವಯನಾಡ್ನಿಂದ ಸ್ಪರ್ಧಿಸುತ್ತಿದ್ದಾರೆ.</p>.<p>‘ಮೈತ್ರಿಕೂಟದ ಒಪ್ಪಂದದ ಅನುಸಾರ ಸಿಪಿಐ ನಾಲ್ಕು ಸೀಟುಗಳನ್ನು ಪಡೆದಿತ್ತು. ಅದರಲ್ಲಿ ವಯನಾಡ್ ಕೂಡ ಒಂದು. ಹೀಗಾಗಿ ಅಲ್ಲಿ ಅಭ್ಯರ್ಥಿಯನ್ನು ಘೋಷಿಸಿದ್ದೇವೆ. ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಆಯಾ ಪಕ್ಷಗಳ ವಿಶೇಷಾಧಿಕಾರ. ಈ ವಿಷಯದಲ್ಲಿ ಇದು ಕಾಂಗ್ರೆಸ್ ಪಕ್ಷದ ವಿಶೇಷಾಧಿಕಾರ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ, ‘ರಾಹುಲ್ ಗಾಂಧಿ ರಾಜ್ಯ ನಾಯಕ ಅಲ್ಲ, ರಾಷ್ಟ್ರ ನಾಯಕ. ಬಿಜೆಪಿಗೆ ತೀವ್ರ ಸ್ಪರ್ಧೆಯೊಡ್ಡುವ ಯಾವುದಾದರೂ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>