<p><strong>ಮುಂಬೈ</strong>: ‘ವಿಕಸಿತ ಭಾರತ’ ಗುರಿ ಸಾಧಿಸಲು ‘ವಿಕಸಿತ ಮಹಾರಾಷ್ಟ್ರ’ದ ಪರಿಕಲ್ಪನೆಯು ಅಗತ್ಯವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾನುವಾರ ತಿಳಿಸಿದ್ದಾರೆ,</p><p>ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆ ಪತ್ರಿಕಾಗೋಷ್ಠಿ ಉದ್ದೇಶಿಸಿ ನಗರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರವು ತಂತ್ರಜ್ಞಾನ ಮತ್ತು ಮೂಲಸೌಕರ್ಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಹೀಗಾಗಿ ವಿಕಸಿತ ಭಾರತ ಗುರಿ ಸಾಧಿಸಲು ಮಹಾರಾಷ್ಟ್ರದ ಅಭಿವೃದ್ದಿಯೂ ಪ್ರಮುಖ ಪಾತ್ರವಹಿಸಲಿದೆ ಎಂದು ಹೇಳಿದ್ದಾರೆ.</p>.Cyclone Dana | ಒಡಿಶಾದ ಪ್ರವಾಹ ಪೀಡಿತ ಗ್ರಾಮದಿಂದ 24 ಜನರ ರಕ್ಷಣೆ.ಹಸೀನಾ ವಿರುದ್ಧ ಕೊಲೆ ಪ್ರಕರಣ: ವರದಿ ಸಲ್ಲಿಸುವಂತೆ ಬಾಂಗ್ಲಾ ನ್ಯಾಯಾಲಯ ಆದೇಶ.<p>ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇರುವುದು ಅಗತ್ಯ. ಈ ಮೂಲಕ ವಿಕಸಿತ ಮಹಾರಾಷ್ಟ್ರ ಪರಿಕಲ್ಪನೆ ಸಾಕಾರಗೊಳ್ಳಲಿದೆ ಎಂದೂ ಜೈಶಂಕರ್ ತಿಳಿಸಿದ್ದಾರೆ.</p><p>ಭಾರತವು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿದ್ದು, ಶೂನ್ಯ ಸಹಿಷ್ಣುತೆ ಹೊಂದಿದೆ. ಎನ್ಡಿಎ ಮೈತ್ರಿಕೂಟ ಮೂರನೇ ಅವಧಿಯಲ್ಲಿ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚಿನ ಗಮನಹರಿಸಲಿದೆ ಎಂದೂ ಜೈಶಂಕರ್ ಹೇಳಿದ್ದಾರೆ, </p><p>288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಬರಲಿದೆ.</p> .ಅಕ್ರಮ ಮೀನುಗಾರಿಕೆ ಆರೋಪ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ.‘ಡಿಜಿಟಲ್ ಅರೆಸ್ಟ್’ನಂತಹ ಸೈಬರ್ ಅಪರಾಧಗಳಿಂದ ರಕ್ಷಣೆಗೆ ಜಾಗೃತಿ ಅಗತ್ಯ: ಮೋದಿ.ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಒಳನುಸುಳುವಿಕೆ ತಡೆ ಅಗತ್ಯ: ಅಮಿತ್ ಶಾ.ಕೇಂದ್ರ ಸಚಿವರು ಬುಲೆಟ್ ರೈಲು ಬಿಡುವುದರಲ್ಲಿ ನಿರತರಾಗಿದ್ದಾರೆ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ವಿಕಸಿತ ಭಾರತ’ ಗುರಿ ಸಾಧಿಸಲು ‘ವಿಕಸಿತ ಮಹಾರಾಷ್ಟ್ರ’ದ ಪರಿಕಲ್ಪನೆಯು ಅಗತ್ಯವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾನುವಾರ ತಿಳಿಸಿದ್ದಾರೆ,</p><p>ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆ ಪತ್ರಿಕಾಗೋಷ್ಠಿ ಉದ್ದೇಶಿಸಿ ನಗರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರವು ತಂತ್ರಜ್ಞಾನ ಮತ್ತು ಮೂಲಸೌಕರ್ಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಹೀಗಾಗಿ ವಿಕಸಿತ ಭಾರತ ಗುರಿ ಸಾಧಿಸಲು ಮಹಾರಾಷ್ಟ್ರದ ಅಭಿವೃದ್ದಿಯೂ ಪ್ರಮುಖ ಪಾತ್ರವಹಿಸಲಿದೆ ಎಂದು ಹೇಳಿದ್ದಾರೆ.</p>.Cyclone Dana | ಒಡಿಶಾದ ಪ್ರವಾಹ ಪೀಡಿತ ಗ್ರಾಮದಿಂದ 24 ಜನರ ರಕ್ಷಣೆ.ಹಸೀನಾ ವಿರುದ್ಧ ಕೊಲೆ ಪ್ರಕರಣ: ವರದಿ ಸಲ್ಲಿಸುವಂತೆ ಬಾಂಗ್ಲಾ ನ್ಯಾಯಾಲಯ ಆದೇಶ.<p>ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇರುವುದು ಅಗತ್ಯ. ಈ ಮೂಲಕ ವಿಕಸಿತ ಮಹಾರಾಷ್ಟ್ರ ಪರಿಕಲ್ಪನೆ ಸಾಕಾರಗೊಳ್ಳಲಿದೆ ಎಂದೂ ಜೈಶಂಕರ್ ತಿಳಿಸಿದ್ದಾರೆ.</p><p>ಭಾರತವು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿದ್ದು, ಶೂನ್ಯ ಸಹಿಷ್ಣುತೆ ಹೊಂದಿದೆ. ಎನ್ಡಿಎ ಮೈತ್ರಿಕೂಟ ಮೂರನೇ ಅವಧಿಯಲ್ಲಿ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚಿನ ಗಮನಹರಿಸಲಿದೆ ಎಂದೂ ಜೈಶಂಕರ್ ಹೇಳಿದ್ದಾರೆ, </p><p>288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಬರಲಿದೆ.</p> .ಅಕ್ರಮ ಮೀನುಗಾರಿಕೆ ಆರೋಪ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ.‘ಡಿಜಿಟಲ್ ಅರೆಸ್ಟ್’ನಂತಹ ಸೈಬರ್ ಅಪರಾಧಗಳಿಂದ ರಕ್ಷಣೆಗೆ ಜಾಗೃತಿ ಅಗತ್ಯ: ಮೋದಿ.ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಒಳನುಸುಳುವಿಕೆ ತಡೆ ಅಗತ್ಯ: ಅಮಿತ್ ಶಾ.ಕೇಂದ್ರ ಸಚಿವರು ಬುಲೆಟ್ ರೈಲು ಬಿಡುವುದರಲ್ಲಿ ನಿರತರಾಗಿದ್ದಾರೆ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>