<p><strong>ನವದೆಹಲಿ:</strong> ದೆಹಲಿಯ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅರವಿಂದ ಕೇಜ್ರಿವಾಲ್ ಅವರಿಗೆ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ದೂರಿದೆ. </p><p>ಪ್ರಾಮಾಣಿಕ ಹಾಗೂ ಪಾರದರ್ಶಕ ಸರ್ಕಾರವನ್ನು ನಡೆಸಬಲ್ಲ ಇದಕ್ಕೂ ಉತ್ತಮವಾದ ಸಿಎಂ ಅನ್ನು ಹೊಂದಲು ರಾಷ್ಟ್ರ ರಾಜಧಾನಿಯ ಜನರು ಅರ್ಹರಾಗಿದ್ದಾರೆ ಎಂದು ಹೇಳಿದೆ. </p><p>ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಅರವಿಂದ ಕೇಜ್ರಿವಾಲ್ ಅವರ 'ದ್ವಂದ್ವ ನೀತಿ'ಯನ್ನು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರಶ್ನಿಸಿದ್ದಾರೆ. </p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇನ್ನೊಬ್ಬ ಸಹೋದ್ಯೋಗಿ ಸತ್ಯೇಂದ್ರ ಜೈನ್ ಅವರಿಂದ ರಾಜೀನಾಮೆ ಪಡೆದಿರುವ ಕೇಜ್ರಿವಾಲ್, ಸ್ವತಃ ತಾವೇ ಬಂಧನಕ್ಕೊಳಗಾದ ಸಂದರ್ಭದಲ್ಲಿ ರಾಜೀನಾಮೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. </p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಏ. 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನು ಉಲ್ಲೇಖ ಮಾಡಿರುವ ಗೌರವ್ ಭಾಟಿಯಾ, ಜೈಲಿನಲ್ಲಿದ್ದುಕೊಂಡು ಸರ್ಕಾರ ನಡೆಸಲು ಹೇಗೆ ಸಾಧ್ಯ? ಕೇಜ್ರಿವಾಲ್ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದಾರೆ. </p>.ತಿಹಾರ್ ಜೈಲಿಗೆ ಕೇಜ್ರಿವಾಲ್: ಪತ್ನಿಯನ್ನು ಸಿಎಂ ಮಾಡುವ ಯೋಜನೆ ಅವರದ್ದು ಎಂದ BJP.ಬಿಜೆಪಿಗೆ ಸೇರದಿದ್ದರೆ ಇ.ಡಿ ನನ್ನನ್ನೂ ಬಂಧಿಸುತ್ತದೆ: ಎಎಪಿ ಸಚಿವೆ ಅತಿಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅರವಿಂದ ಕೇಜ್ರಿವಾಲ್ ಅವರಿಗೆ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ದೂರಿದೆ. </p><p>ಪ್ರಾಮಾಣಿಕ ಹಾಗೂ ಪಾರದರ್ಶಕ ಸರ್ಕಾರವನ್ನು ನಡೆಸಬಲ್ಲ ಇದಕ್ಕೂ ಉತ್ತಮವಾದ ಸಿಎಂ ಅನ್ನು ಹೊಂದಲು ರಾಷ್ಟ್ರ ರಾಜಧಾನಿಯ ಜನರು ಅರ್ಹರಾಗಿದ್ದಾರೆ ಎಂದು ಹೇಳಿದೆ. </p><p>ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಅರವಿಂದ ಕೇಜ್ರಿವಾಲ್ ಅವರ 'ದ್ವಂದ್ವ ನೀತಿ'ಯನ್ನು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರಶ್ನಿಸಿದ್ದಾರೆ. </p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇನ್ನೊಬ್ಬ ಸಹೋದ್ಯೋಗಿ ಸತ್ಯೇಂದ್ರ ಜೈನ್ ಅವರಿಂದ ರಾಜೀನಾಮೆ ಪಡೆದಿರುವ ಕೇಜ್ರಿವಾಲ್, ಸ್ವತಃ ತಾವೇ ಬಂಧನಕ್ಕೊಳಗಾದ ಸಂದರ್ಭದಲ್ಲಿ ರಾಜೀನಾಮೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. </p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಏ. 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನು ಉಲ್ಲೇಖ ಮಾಡಿರುವ ಗೌರವ್ ಭಾಟಿಯಾ, ಜೈಲಿನಲ್ಲಿದ್ದುಕೊಂಡು ಸರ್ಕಾರ ನಡೆಸಲು ಹೇಗೆ ಸಾಧ್ಯ? ಕೇಜ್ರಿವಾಲ್ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದಾರೆ. </p>.ತಿಹಾರ್ ಜೈಲಿಗೆ ಕೇಜ್ರಿವಾಲ್: ಪತ್ನಿಯನ್ನು ಸಿಎಂ ಮಾಡುವ ಯೋಜನೆ ಅವರದ್ದು ಎಂದ BJP.ಬಿಜೆಪಿಗೆ ಸೇರದಿದ್ದರೆ ಇ.ಡಿ ನನ್ನನ್ನೂ ಬಂಧಿಸುತ್ತದೆ: ಎಎಪಿ ಸಚಿವೆ ಅತಿಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>