<p><strong>ನವದೆಹಲಿ</strong>: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುರುವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.</p><p>ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಮೊದಲ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಿರಿಯ ನಾಯಕರು ಮೋದಿ ಅವರನ್ನು ನಿಂತು ಅಭಿನಂದಿಸುತ್ತಿದ್ದಂತೆ ಪಕ್ಷದ ಸಂಸದರು ಅವರ ನಾಯಕತ್ವವನ್ನು ಶ್ಲಾಘಿಸಿ ಘೋಷಣೆಗಳನ್ನು ಕೂಗಿದ್ದಾರೆ.</p>. <p>ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಕಾಂಗ್ರೆಸ್ ಕೈಯಿಂದ ಅಧಿಕಾರ ಕಸಿದುಕೊಂಡಿದೆ.</p><p>ಮೋದಿಯವರ ನಾಯಕತ್ವವೇ ದೊಡ್ಡ ಗೆಲುವಿಗೆ ಪ್ರಮುಖ ಕಾರಣ ಎಂದು ಸಂಸದರು ಹೊಗಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಶಾಲು ಹೊದಿಸಿ, ಹಾರ ಹಾಕಿ ಮೋದಿಯವರನ್ನು ಸನ್ಮಾನಿಸಿದ್ದಾರೆ.</p> . <p>ತೆಲಂಗಾಣದಲ್ಲಿ ಬಿಆರ್ಎಸ್ನಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡಿದ್ದು, ಅಲ್ಲಿ ಬಿಜೆಪಿಯ ಮತ ಗಳಿಕೆ ಹೆಚ್ಚಾಗಿದೆ.</p><p>ತನ್ನ ಎಲ್ಲ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರನ್ನು ಒಳಗೊಂಡಿರುವ ಬಿಜೆಪಿ ಸಂಸದೀಯ ಪಕ್ಷವು ಸಾಮಾನ್ಯವಾಗಿ ಅಧಿವೇಶನಗಳ ಸಮಯದಲ್ಲಿ ವಾರಕ್ಕೊಮ್ಮೆ ಸಭೆ ಸೇರುತ್ತದೆ.</p><p>ಸಭೆಯಲ್ಲಿ, ಪಧಾನಿ ಮೋದಿ ಸೇರಿದಂತೆ ನಾಯಕರು ಸಂಸತ್ತಿನ ಕಾರ್ಯಸೂಚಿ ಮತ್ತು ಪಕ್ಷದ ಸಾಂಸ್ಥಿಕ ಹಾಗೂ ರಾಜಕೀಯ ಪ್ರಚಾರಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸುತ್ತಾರೆ.</p> .Assembly Election Results 2023 | ಮತ್ತೆ ಮೋದಿ ಅಲೆ, ‘ಕೈ’ ತರಗೆಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುರುವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.</p><p>ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಮೊದಲ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಿರಿಯ ನಾಯಕರು ಮೋದಿ ಅವರನ್ನು ನಿಂತು ಅಭಿನಂದಿಸುತ್ತಿದ್ದಂತೆ ಪಕ್ಷದ ಸಂಸದರು ಅವರ ನಾಯಕತ್ವವನ್ನು ಶ್ಲಾಘಿಸಿ ಘೋಷಣೆಗಳನ್ನು ಕೂಗಿದ್ದಾರೆ.</p>. <p>ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಕಾಂಗ್ರೆಸ್ ಕೈಯಿಂದ ಅಧಿಕಾರ ಕಸಿದುಕೊಂಡಿದೆ.</p><p>ಮೋದಿಯವರ ನಾಯಕತ್ವವೇ ದೊಡ್ಡ ಗೆಲುವಿಗೆ ಪ್ರಮುಖ ಕಾರಣ ಎಂದು ಸಂಸದರು ಹೊಗಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಶಾಲು ಹೊದಿಸಿ, ಹಾರ ಹಾಕಿ ಮೋದಿಯವರನ್ನು ಸನ್ಮಾನಿಸಿದ್ದಾರೆ.</p> . <p>ತೆಲಂಗಾಣದಲ್ಲಿ ಬಿಆರ್ಎಸ್ನಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡಿದ್ದು, ಅಲ್ಲಿ ಬಿಜೆಪಿಯ ಮತ ಗಳಿಕೆ ಹೆಚ್ಚಾಗಿದೆ.</p><p>ತನ್ನ ಎಲ್ಲ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರನ್ನು ಒಳಗೊಂಡಿರುವ ಬಿಜೆಪಿ ಸಂಸದೀಯ ಪಕ್ಷವು ಸಾಮಾನ್ಯವಾಗಿ ಅಧಿವೇಶನಗಳ ಸಮಯದಲ್ಲಿ ವಾರಕ್ಕೊಮ್ಮೆ ಸಭೆ ಸೇರುತ್ತದೆ.</p><p>ಸಭೆಯಲ್ಲಿ, ಪಧಾನಿ ಮೋದಿ ಸೇರಿದಂತೆ ನಾಯಕರು ಸಂಸತ್ತಿನ ಕಾರ್ಯಸೂಚಿ ಮತ್ತು ಪಕ್ಷದ ಸಾಂಸ್ಥಿಕ ಹಾಗೂ ರಾಜಕೀಯ ಪ್ರಚಾರಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸುತ್ತಾರೆ.</p> .Assembly Election Results 2023 | ಮತ್ತೆ ಮೋದಿ ಅಲೆ, ‘ಕೈ’ ತರಗೆಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>