<p><strong>ನವದೆಹಲಿ:</strong> ‘ವೃತ್ತಿಪರ ನಿರಾಶಾವಾದಿಗಳ ಒತ್ತಡದಿಂದ ಈ ಸಮಾಜವನ್ನು ಮುಕ್ತಗೊಳಿಸಬೇಕು’ ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ‘ಪುರಾತನ ಚಿಂತನೆ ಮತ್ತು ನಂಬಿಕೆಗಳ ಮರುವಿಮರ್ಶೆ ಅಗತ್ಯ’ ಎಂದು ಹೇಳಿದ್ದಾರೆ. </p>.<p>ದೇಶದ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ ಆಚರಣೆಗೆ ಉಳಿದಿರುವ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಲೇಬೇಕಾಗಿದೆ ಎಂದು ಹೇಳಿದ್ದಾರೆ.</p>.<p>ಕನ್ಯಾಕುಮಾರಿಯಿಂದ ನವದೆಹಲಿಗೆ ವಿಮಾನದಲ್ಲಿ ತೆರಳುವಾಗ ಜೂನ್ 1ರಂದು ಬರೆದಿರುವ ಲೇಖನದಲ್ಲಿ ಅವರು ಈ ಮಾತು ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬಳಿಕ ಮೇ 30ರಂದು, ತಪಸ್ಸು ಕೈಗೊಳ್ಳಲು ಅವರು ಕನ್ಯಾಕುಮಾರಿಗೆ ತೆರಳಿದ್ದರು. </p>.<p>21ನೇ ಶತಮಾನದ ಜಗತ್ತು, ಹಲವು ಭರವಸೆಗಳೊಂದಿಗೆ ಭಾರತದತ್ತ ದೃಷ್ಟಿ ನೆಟ್ಟಿದೆ. ಜಾಗತಿಕ ಆಯಾಮ ತಲುಪಲು ನಾವು ಅನೇಕ ಬದಲಾವಣೆ ತರಬೇಕಾಗಿದೆ. ಅದಕ್ಕಾಗಿ ನಮ್ಮ ಸಾಂಪ್ರದಾಯಿಕ ಶೈಲಿಯ ಚಿಂತನೆಯನ್ನು ಬದಲಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.</p>.<p>ಮೋದಿ ಅವರ ಈ ಲೇಖನ ಹಲವು ದೈನಿಕಗಳಲ್ಲಿ ಲೋಕಸಭೆ ಚುನಾವಣೆಯ ಮತ ಎಣಿಕೆಯ ಮುನ್ನಾದಿನವಾದ ಸೋಮವಾರ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಗಲಿದ್ದು, ಮೋದಿ 3ನೇ ಅವಧಿಗೆ ಪ್ರಧಾನಿ ಆಗಲಿದ್ದಾರೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈ ಲೇಖನವು ಗಮನಸೆಳೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ವೃತ್ತಿಪರ ನಿರಾಶಾವಾದಿಗಳ ಒತ್ತಡದಿಂದ ಈ ಸಮಾಜವನ್ನು ಮುಕ್ತಗೊಳಿಸಬೇಕು’ ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ‘ಪುರಾತನ ಚಿಂತನೆ ಮತ್ತು ನಂಬಿಕೆಗಳ ಮರುವಿಮರ್ಶೆ ಅಗತ್ಯ’ ಎಂದು ಹೇಳಿದ್ದಾರೆ. </p>.<p>ದೇಶದ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ ಆಚರಣೆಗೆ ಉಳಿದಿರುವ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಲೇಬೇಕಾಗಿದೆ ಎಂದು ಹೇಳಿದ್ದಾರೆ.</p>.<p>ಕನ್ಯಾಕುಮಾರಿಯಿಂದ ನವದೆಹಲಿಗೆ ವಿಮಾನದಲ್ಲಿ ತೆರಳುವಾಗ ಜೂನ್ 1ರಂದು ಬರೆದಿರುವ ಲೇಖನದಲ್ಲಿ ಅವರು ಈ ಮಾತು ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬಳಿಕ ಮೇ 30ರಂದು, ತಪಸ್ಸು ಕೈಗೊಳ್ಳಲು ಅವರು ಕನ್ಯಾಕುಮಾರಿಗೆ ತೆರಳಿದ್ದರು. </p>.<p>21ನೇ ಶತಮಾನದ ಜಗತ್ತು, ಹಲವು ಭರವಸೆಗಳೊಂದಿಗೆ ಭಾರತದತ್ತ ದೃಷ್ಟಿ ನೆಟ್ಟಿದೆ. ಜಾಗತಿಕ ಆಯಾಮ ತಲುಪಲು ನಾವು ಅನೇಕ ಬದಲಾವಣೆ ತರಬೇಕಾಗಿದೆ. ಅದಕ್ಕಾಗಿ ನಮ್ಮ ಸಾಂಪ್ರದಾಯಿಕ ಶೈಲಿಯ ಚಿಂತನೆಯನ್ನು ಬದಲಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.</p>.<p>ಮೋದಿ ಅವರ ಈ ಲೇಖನ ಹಲವು ದೈನಿಕಗಳಲ್ಲಿ ಲೋಕಸಭೆ ಚುನಾವಣೆಯ ಮತ ಎಣಿಕೆಯ ಮುನ್ನಾದಿನವಾದ ಸೋಮವಾರ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಗಲಿದ್ದು, ಮೋದಿ 3ನೇ ಅವಧಿಗೆ ಪ್ರಧಾನಿ ಆಗಲಿದ್ದಾರೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈ ಲೇಖನವು ಗಮನಸೆಳೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>