ರಾಜಕೀಯ ತಿರುವು:ಸಂತ್ರಸ್ತೆಯ ಸಹೋದರನ ಮೇಲೆ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಸ್ಥಳೀಯ ಕಾರ್ಯಕರ್ತ ನಟರಾಜ ಎಂಬುವನು ಹಲ್ಲೆ ನಡೆಸಿದ್ದ ಸುದ್ದಿ ತಿಳಿಯುತ್ತಿದ್ದಂತೆ ಪ್ರಕರಣದ ರಾಜಕೀಯ ತಿರುವು ಪಡೆದುಕೊಂಡಿದೆ. ನಟರಾಜನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೃತ್ಯದಲ್ಲಿ ಇವನ ಜೊತೆ ಭಾಗಿಯಾಗಿದ್ದಾರೆ ಎನ್ನಲಾದ ಶಬರಿರಾಜನ್, ತಿರುನವಕ್ಕರಸು, ಸತೀಶ್ ಮತ್ತು ವಸಂತಕುಮಾರ್ ಎಂಬುವರನ್ನು ಬಂಧಿಸಲಾಗಿದೆ. ಸದ್ಯ ಇವರು ನ್ಯಾಯಾಂಗ ವಶದಲ್ಲಿದ್ದಾರೆ.ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷ ಡಿಎಂಕೆ, ವಿದ್ಯಾರ್ಥಿ ಸಂಘಟನೆಗಳು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದವು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಚರ್ಚೆ ಕಾವೇರಿತ್ತು.