ಪುರಿ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ₹ 800 ಕೋಟಿ ರೂಪಾಯಿ ವೆಚ್ಚದ ಪಾರಂಪರಿಕ ಕಾರಿಡಾರ್ ಯೋಜನೆಯನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಉದ್ಘಾಟಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ ಅವರು ಭಗವಾನ್ ಜಗನ್ನಾಥನ ಆಶೀರ್ವಾದದಿಂದ ಈ ಯೋಜನೆ ಸಾಧ್ಯವಾಗಿದೆ ಎಂದು ಹೇಳಿದರು.
ಈ ಯೋಜನೆಯಲ್ಲಿ ಪಾರ್ಕಿಂಗ್ ಪ್ರದೇಶಗಳು, ಸೇತುವೆಗಳು, ರಸ್ತೆಗಳು, ಯಾತ್ರಾ ಕೇಂದ್ರಗಳು, ವಿಶ್ರಾಂತಿ ಕೊಠಡಿಗಳು, ಶೌಚಾಲಯಗಳು ಸೇರಿದಂತೆ ಭಕ್ತರಿಗೆ ಇತರ ಸೌಲಭ್ಯಗಳು ಒಳಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.